ದೇಶ

ರಾಜಕೀಯದಿಂದ ದೂರವಿರಲು ಕನ್ಹಯ್ಯಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸಲಹೆ

ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ಗೆ ರಾಜಕೀಯದಿಂದ ದೂರವಿದ್ದು ಶಿಕ್ಷಣದತ್ತ ಗಮನ ಕೇಂದ್ರೀಕರಿಸಲು ವೆಂಕಯ್ಯ ನಾಯ್ಡು ಸಲಹೆ ನೀಡಿದ್ದಾರೆ.

ನವದೆಹಲಿ: ಸಂಸತ್ ನಲ್ಲಿ ಎಡಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ಗೆ ರಾಜಕೀಯದಿಂದ ದೂರವಿದ್ದು ಶಿಕ್ಷಣದತ್ತ ಗಮನ ಕೇಂದ್ರೀಕರಿಸಲು ಸಲಹೆ ನೀಡಿದ್ದಾರೆ.
ಕನ್ಹಯ್ಯ ಕುಮಾರ್ ವಿವಾದದಿಂದ ಉಂಟಾಗಿರುವ ಜನಪ್ರಿಯತೆಗೆ ಹೆಚ್ಚು ಗಮನ ಕೊಡದೇ ಫೆ.9 ರಂದು ನಡೆದಂತಹ ಘಟನೆಗಳು ಪುನಾರಾವರ್ತನೆಯಾಗದಂತೆ ಎಚ್ಚರ ವಹಿಸಲಿ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. ಜೆಎನ್ ಯು ವಿದ್ಯಾರ್ಥಿಗಳು ರಾಜಕೀಯದಿಂದ ದೂರ ಉಳಿಯಬೇಕು, ಒಂದು ವೇಳೆ ರಾಜಕೀಯದಲ್ಲಿ ತೀವ್ರವಾದ ಆಸಕ್ತಿಯುಳ್ಳವರಾದರೆ, ಶಿಕ್ಷಣ ಮೊಟಕುಗೊಳಿಸಿ ರಾಜಕೀಯ ಪಕ್ಷ ಸೇರಲಿ, ಕನ್ಹಯ್ಯ ಕುಮಾರ್ ನ ನೆಚ್ಚಿನ ಪಕ್ಷ ಸಂಸತ್ ನಲ್ಲಿ ಒಂದು ಅಂಕಿಯ ಸದಸ್ಯರ ಬಲ ಹೊಂದಿದೆ. ರಾಜಕೀಯ ಆಸಕ್ತಿಯನ್ನು ಇಟ್ಟುಕೊಂಡು, ಅಫ್ಜಲ್ ಗುರು, ಯಾಕೂಬ್ ಮೆಮನ್, ಮುಕ್ಬೂಲ್ ಭಟ್ ನಂತಹವರನ್ನು ಬೆಂಬಲಿಸಿ ವಿದ್ಯಾರ್ಥಿಗಳನ್ನು ಸೆಳೆಯುವ ಅಗತ್ಯವಿಲ್ಲ  ಎಂದು ಎಡಪಕ್ಷಗಳ ವಿರುದ್ಧ ವೆಂಕಯ್ಯ ನಾಯ್ಡು ವಾಗ್ದಾಳಿ ನಡೆಸಿದ್ದಾರೆ. ಜೆಎನ್ ಯು ನಲ್ಲಿ ರಾಷ್ಟ್ರವಿರೋಧಿ ಘೋಷಣೆ ಕೇಳಿಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ನನ್ನು ಪೊಲೀಸರು ಬಂಧಿಸಿ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿದ್ದರು. ಕನ್ಹಯ್ಯ ಕುಮಾರ್ ಮಾ.3 ರಂದು ಜಾಮೀನು ಪಡೆದು ಹೊರಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT