ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಕಥೇರಿಯಾ ಪ್ರಚೋದನಾಕಾರಿಯಾಗಿ ಮಾತನಾಡಿಲ್ಲ: ರಾಜನಾಥ ಸಿಂಗ್

ಕೇಂದ್ರ ಸಚಿವ ರಾಮಶಂಕರ ಕಥೇರಿಯಾ ಅವರ ಭಾಷಣವನ್ನು ಕೇಳಿದ್ದು, ಕಥೇರಿಯಾ ಅವರು ಯಾವುದೇ ರೀತಿಯ ಪ್ರಚೋದನಾಕಾರಿಯಾಗಿ ಮಾತನಾಡಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ಕೇಂದ್ರ ಸಚಿವ ರಾಮಶಂಕರ ಕಥೇರಿಯಾ ಅವರ ಭಾಷಣವನ್ನು ಕೇಳಿದ್ದು, ಕಥೇರಿಯಾ ಅವರು ಯಾವುದೇ ರೀತಿಯ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಮುಸ್ಲಿಮರ ಕುರಿತಂತೆ ಕಥೇರಿಯಾ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದರು ಎಂಬ ಆರೋಪಗಳ ಕುರಿತಂತೆ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ನಿನ್ನೆ ಸ್ಪಷ್ಟನೆ ನೀಡಿರುವ ಅವರು, ಕಥೇರಿಯಾ ಅವರ ಭಾಷಣವನ್ನು ಕೇಳಿದ್ದೇನೆ. ಭಾಷಣದಲ್ಲಿ ಪ್ರಚೋದನಾಕಾರಿ ಅಂಶಗಳಾವುದೂ ಕಂಡು ಬಂದಿಲ್ಲ. ನಮ್ಮ ಸರ್ಕಾರ ಪ್ರಚೋದನಾತ್ಮಕ ಹಾಗೂ ದೇಶ ವಿಭಜನೆಗೆ ಕಾರಣವಾಗುವಂಥ ಹೇಳಿಕೆಗಳನ್ನು ಖಂಡಿಸುತ್ತದೆ. ಅಂತಹ ಹೇಳಿಕೆಗಳಿಗೆ ಆಸ್ಪದ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಸರ್ಕಾರ ಸಂವಿಧಾನ ಹಾಗೂ ಕಾನೂನಿಗೆ ಗೌರವ ನೀಡುತ್ತದೆ. ಕಥೇರಿಯಾ ಅವರು ಮಾತನಾಡಿದ್ದಾರೆಂದು ಹೇಳಲಾಗುತ್ತಿರುವ ಸಿಡಿಯನ್ನು ಈಗಾಗಲೇ ಪರಿಶೀಲನೆಗೆ ನೀಡಲಾಗಿದೆ. ಈಗಾಗಲೇ ಅದರ ವರದಿಯೂ ಬಂದಿದ್ದು, ವರದಿಯಲ್ಲಿ ಆಕ್ಷೇಪಾರ್ಹವೇನೂ ಹಾಗೂ ಪ್ರಚೋದನಾಕಾರಿಯಾಗಿರುವುದಾವುದೂ ಕಂಡುಬಂದಿಲ್ಲ ಎಂದು ತಿಳಿಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT