ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಕಥೇರಿಯಾ ಪ್ರಚೋದನಾಕಾರಿಯಾಗಿ ಮಾತನಾಡಿಲ್ಲ: ರಾಜನಾಥ ಸಿಂಗ್

ಕೇಂದ್ರ ಸಚಿವ ರಾಮಶಂಕರ ಕಥೇರಿಯಾ ಅವರ ಭಾಷಣವನ್ನು ಕೇಳಿದ್ದು, ಕಥೇರಿಯಾ ಅವರು ಯಾವುದೇ ರೀತಿಯ ಪ್ರಚೋದನಾಕಾರಿಯಾಗಿ ಮಾತನಾಡಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ಕೇಂದ್ರ ಸಚಿವ ರಾಮಶಂಕರ ಕಥೇರಿಯಾ ಅವರ ಭಾಷಣವನ್ನು ಕೇಳಿದ್ದು, ಕಥೇರಿಯಾ ಅವರು ಯಾವುದೇ ರೀತಿಯ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಮುಸ್ಲಿಮರ ಕುರಿತಂತೆ ಕಥೇರಿಯಾ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದರು ಎಂಬ ಆರೋಪಗಳ ಕುರಿತಂತೆ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ನಿನ್ನೆ ಸ್ಪಷ್ಟನೆ ನೀಡಿರುವ ಅವರು, ಕಥೇರಿಯಾ ಅವರ ಭಾಷಣವನ್ನು ಕೇಳಿದ್ದೇನೆ. ಭಾಷಣದಲ್ಲಿ ಪ್ರಚೋದನಾಕಾರಿ ಅಂಶಗಳಾವುದೂ ಕಂಡು ಬಂದಿಲ್ಲ. ನಮ್ಮ ಸರ್ಕಾರ ಪ್ರಚೋದನಾತ್ಮಕ ಹಾಗೂ ದೇಶ ವಿಭಜನೆಗೆ ಕಾರಣವಾಗುವಂಥ ಹೇಳಿಕೆಗಳನ್ನು ಖಂಡಿಸುತ್ತದೆ. ಅಂತಹ ಹೇಳಿಕೆಗಳಿಗೆ ಆಸ್ಪದ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಸರ್ಕಾರ ಸಂವಿಧಾನ ಹಾಗೂ ಕಾನೂನಿಗೆ ಗೌರವ ನೀಡುತ್ತದೆ. ಕಥೇರಿಯಾ ಅವರು ಮಾತನಾಡಿದ್ದಾರೆಂದು ಹೇಳಲಾಗುತ್ತಿರುವ ಸಿಡಿಯನ್ನು ಈಗಾಗಲೇ ಪರಿಶೀಲನೆಗೆ ನೀಡಲಾಗಿದೆ. ಈಗಾಗಲೇ ಅದರ ವರದಿಯೂ ಬಂದಿದ್ದು, ವರದಿಯಲ್ಲಿ ಆಕ್ಷೇಪಾರ್ಹವೇನೂ ಹಾಗೂ ಪ್ರಚೋದನಾಕಾರಿಯಾಗಿರುವುದಾವುದೂ ಕಂಡುಬಂದಿಲ್ಲ ಎಂದು ತಿಳಿಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT