ಉಗ್ರ ಕರೀಂ ತುಂಡಾ (ಸಂಗ್ರಹ ಚಿತ್ರ) 
ದೇಶ

ಎಲ್ ಇಟಿ ಉಗ್ರ ಕರೀಂ ತುಂಡಾ ದೋಷಮುಕ್ತ

90ರ ದಶಕದಲ್ಲಿ ದೇಶದ ವಿವಿಧೆಡೆ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಲಷ್ಕರ್ ಎ ತೊಯ್ಬಾ ಉಗ್ರ ಅಬ್ದುಲ್ ಕರೀಮ್ ತುಂಡಾನನ್ನು ದೆಹಲಿಯ ಸ್ಥಳೀಯ ನ್ಯಾಯಾಲಯ ಶನಿವಾರ ದೋಷಮುಕ್ತಗೊಳಿಸಿದೆ...

ನವದೆಹಲಿ: 90ರ ದಶಕದಲ್ಲಿ ದೇಶದ ವಿವಿಧೆಡೆ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಲಷ್ಕರ್ ಎ ತೊಯ್ಬಾ ಉಗ್ರ ಅಬ್ದುಲ್ ಕರೀಮ್ ತುಂಡಾನನ್ನು  ದೆಹಲಿಯ ಸ್ಥಳೀಯ ನ್ಯಾಯಾಲಯ ಶನಿವಾರ ದೋಷಮುಕ್ತಗೊಳಿಸಿದೆ.

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ 73 ವರ್ಷದ ಉಗ್ರ ಮುಖಂಡ ತುಂಡಾ ವಿರುದ್ಧ ಪ್ರತ್ಯಕ್ಷ ಸಾಕ್ಷಿಗಳಿಲ್ಲದ ಹಿನ್ನೆಲೆಯಲ್ಲಿ ಆತನ ಬಿಡುಗಡೆ ಮಾಡಿರುವುದಾಗಿ ನ್ಯಾಯಾಲಯ ಹೇಳಿದೆ. ಇದೇ  ವೇಳೆ ತುಂಡಾನ ಮಾವ ಮೊಹಮದ್ ಜಕಾರಿಯಾ ಹಾಗೂ ಸಹಚರರಾದ ಅಲ್ಲಾವುದ್ದೀನ್ ಮತ್ತು ಬಷೀರುದ್ದೀನ್‌ರನ್ನೂ ನ್ಯಾಯಾಲಯ ಬಿಡುಗಡೆ ಮಾಡಲಾಗಿದೆ. 26/11 ಮುಂಬೈ ದಾಳಿ ಬಳಿಕ  ಪಾಕಿಸ್ತಾನದ ಬಳಿ ಭಾರತ ಹಸ್ತಾಂತರ ಕೋರಿದ್ದ 20 ಉಗ್ರರ ಪೈಕಿ ಕರೀಂ ತುಂಡಾ ಒಬ್ಬನಾಗಿದ್ದಾನೆ. 1996ರಲ್ಲಿ ಆತನ ಬಂಧನಕ್ಕೆ ಇಂಟರ್‌ಪೋಲ್ ರೆಡ್‌ಕಾರ್ನರ್ ನೋಟಿಸ್  ಜಾರಿಮಾಡಿತ್ತು.

1994ರಲ್ಲಿ ತುಂಡಾನನ್ನು ಭೇಟಿಯಾಗಿದ್ದ ಅಲ್ಲಾವುದ್ದೀನ್ ಮತ್ತು ಬಷೀರುದ್ದೀನ್, ಜಕಾರಿಯಾ ನೆರವಿನಿಂದ ಲಷ್ಕರ್ ಉಗ್ರ ಸಂಘಟನೆ ಸೇರಿದ್ದರು. ಪಾಕಿಸ್ತಾನ ಮತ್ತು ಬಾಂಗ್ಲಾ ಉಗ್ರಗಾಮಿಗಳ  ತಂಡ ರಚಿಸಿದ್ದ ತುಂಡಾ, 1998ರಲ್ಲಿ ದೇಶದ ಹಲವೆಡೆ ಸರಣಿ ಬಾಂಬ್ ಸ್ಫೋಟದ ಸಂಚು ರೂಪಿಸಿದ್ದ ಎನ್ನಲಾಗಿದೆ. ಸ್ಫೋಟದ ಬಳಿಕ ತಲೆಮರೆಸಿಕೊಂಡಿದ್ದ ಕರೀಂ ತುಂಡಾನನ್ನು 2013 ಆಗಸ್ಟ್  ನಲ್ಲಿ ಭಾರತ-ನೇಪಾಳ ಗಡಿಯಲ್ಲಿ ಬಂಧಿಸಲಾಗಿತ್ತು. ತುಂಡಾ ವಿರುದ್ಧ ದಾಖಲಾಗಿದ್ದ 4 ಪ್ರಕರಣಗಳ ಪೈಕಿ ಮೂರರಲ್ಲಿ ಈಗಾಗಲೇ ಆತ ದೋಷಮುಕ್ತನಾಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಮ್ ಆದ್ಮಿ ದನಿಯಾಗಿದ್ದ ರಾಘವ್ ಚಡ್ಡಾಗೆ AAP ಶಾಕ್: ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ, ಮಾತನಾಡಲು ನಿರ್ಬಂಧ!

SIR ಅಧಿಕಾರಿಗಳನ್ನೇ ಕೂಡಿ ಹಾಕಿದ ಜನತೆ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೆಂಡಾಮಂಡಲ, ಸುರಕ್ಷತೆಗೆ ಕೇಂದ್ರ ಸಶಸ್ತ್ರ ಪಡೆ ನಿಯೋಜಿಸಲು ಸೂಚನೆ

ಹಾವು ಕಡಿತದಿಂದ ಮೂರು ವರ್ಷಗಳಲ್ಲಿ 277 ಮಂದಿ ಸಾವು: ದೇಶದಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು!

50 ವರ್ಷಗಳ ಬಳಿಕ ಮತ್ತೆ ಚಂದ್ರನತ್ತ ಅಮೆರಿಕ: ನಾಲ್ವರು ಗಗನಯಾತ್ರಿಗಳ ಜೊತೆ ನಾಸಾದ ಆರ್ಟೆಮಿಸ್ II ಮಿಷನ್ ಆರಂಭ!

ಕಾನೂನು ಸುವ್ಯವಸ್ಥೆಗೂ GDPಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

SCROLL FOR NEXT