ಜಯತಿ ಘೋಷ್ 
ದೇಶ

ದೇಶವಿರೋಧಿ ಘೋಷಣೆ ಪ್ರಕರಣ ಯೋಜಿತ ಪಿತೂರಿ: ಜೆಎನ್ ಯು ಪ್ರಾಧ್ಯಾಪಕಿ

ಜೆ ಎನ್ ಯು ನಲ್ಲಿ ಅಫ್ಜಲ್ ಗುರುವಿನ ಪರ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೇಳಿಬಂದ ಪ್ರಕರಣ ಪೂರ್ವ ಯೋಜಿತ ಪಿತೂರಿ- ಪ್ರಾಧ್ಯಾಪಕಿ ಜಯತಿ ಘೋಷ್

ನವದೆಹಲಿ: ಜೆ ಎನ್ ಯು ನಲ್ಲಿ ಅಫ್ಜಲ್ ಗುರುವಿನ ಪರ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೇಳಿಬಂದ ಪ್ರಕರಣ ಪೂರ್ವ ಯೋಜಿತ ಪಿತೂರಿ ಎಂದು ಜೆ ಎನ್ ಯು ಪ್ರಾಧ್ಯಾಪಕಿ ಜಯತಿ ಘೋಷ್ ಹೇಳಿದ್ದಾರೆ.
ವಿಶ್ವವಿದ್ಯಾನಿಲಯದ ತೇಜೋವಧೆ ಮಾಡುವುದಕ್ಕಾಗಿ ಇಂಥದ್ದೊಂದು ಪಿತೂರಿಯನ್ನು ಉನ್ನತ ಮಟ್ಟದಲ್ಲಿ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಮುಸುಕು ಧರಿಸಿ ಭಾಗವಹಿಸಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ವ್ಯಕ್ತಿಗಳು ಗುಪ್ತಚರ ಇಲಾಖೆಯವರು ಎಂಬುದು ನಮ್ಮ ಅನುಮಾನ ಎಂದು ಎನ್ ಡಿ ಎ ಒಕ್ಕೂಟದ ರಾಷ್ಟ್ರವಿರೋಧಿ ನೀತಿಗಳ ಬಗ್ಗೆ ಮಾತನಾಡಿದ ಜೆಎನ್ ಯು ಪ್ರಾಧ್ಯಾಪಕಿ ಹಾಗೂ ಖ್ಯಾತ ಅರ್ಥತಜ್ಞರಾದ ಜಯತಿ ಘೋಷ್ ತಿಳಿಸಿದ್ದಾರೆ.
ಜೆಎನ್ ಯು ನಲ್ಲಿ ಯೋಚನಾ ಶಕ್ತಿ ಇರುವ, ವಿಶ್ಲೇಷಣೆ ಮಾಡಲು ಸಾಮರ್ಥ್ಯವಿರುವ ವಿದ್ಯಾರ್ಥಿಗಳಿದ್ದಾರೆ. ಆದ್ದರಿಂದ  ನಮ್ಮನ್ನು ವಿನಾಕಾರಣ ಟಾರ್ಗೆಟ್ ಮಾಡಲಾಗುತ್ತಿದೆ.  ನಮ್ಮನ್ನು ನಾವು ಸಮರ್ಥಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಘೋಷ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT