ಪ್ರಧಾನ ಮಂತ್ರಿ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

ಮಹಿಳಾ ಸಬಲೀಕರಣದಿಂದ ದೇಶ ಅಭಿವೃದ್ಧಿ: ನರೇಂದ್ರ ಮೋದಿ

ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ...

ನವದೆಹಲಿ: ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ದೆಹಲಿಯಲ್ಲಿಂದು ಮಹಿಳಾ ಶಾಸಕಿಯರ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಭಾರತ ಬಲಿಷ್ಟ ದೇಶವಾಗಿ ಬೆಳೆಯಲು ಮಹಿಳೆಯರನ್ನು ಸಬಲೀಕರಣಗೊಳ್ಳಬೇಕು ಎಂದರು.

ಮೂಲಭೂತ ಸೌಕರ್ಯ ಅಭಿವೃದ್ಧಿ, ರಸ್ತೆ, ಬಜೆಟ್ ಇವುಗಳಿಂದ ಮಾತ್ರವೇ ದೇಶ ಉದ್ದಾರವಾಗುವುದಿಲ್ಲ. ಇಲ್ಲಿನ ನಾಗರಿಕರು ಮುಖ್ಯವಾಗಿ ಮಹಿಳೆಯರ ಕೈಯಲ್ಲಿ ದೇಶದ ಅಭಿವೃದ್ಧಿಯಿದೆ. ಒಂದು ಮನೆಯನ್ನು ಬೆಳಗಲು ಹೆಣ್ಣುಮಕ್ಕಳು ಹೇಗೆ ಕಾರಣಕರ್ತರಾಗುತ್ತಾರೆಯೋ ಹಾಗೆಯೇ ದೇಶದ ಅಭಿವೃದ್ಧಿಯಲ್ಲಿ ಕೂಡ ಮಹಿಳೆಯರ ಪಾತ್ರ ಮುಖ್ಯ ಎಂದರು.

ಒಬ್ಬ ವ್ಯಕ್ತಿಯ ಬಾಳಿನಲ್ಲಿ ತಂತ್ರಜ್ಞಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚು ಸಮರ್ಥರು ಎಂದು ನನಗೆ ಅನಿಸುತ್ತದೆ. ಮಹಿಳಾ ಸಬಲೀಕರಣಕ್ಕೆ ಜನರ ಮನೋಸ್ಥಿತಿ ಬದಲಾಗಬೇಕು. ಯಾರು ಸಮಾಜದಲ್ಲಿ ಹಿಂದೆ ಉಳಿದಿದ್ದಾರೋ ಅವರು ಬದಲಾಗಬೇಕು ಎಂದು ಪ್ರಧಾನಿ ಪ್ರತಿಪಾದಿಸಿದರು.

ಲೋಕಸಭಾ ಅಧ್ಯಕ್ಷೆ ಸುಮಿತ್ರಾ ಮಹಾಜನ್ ಈ ಸಮ್ಮೇಳನವನ್ನು ಆಯೋಜಿಸಿದ್ದರು. ಇದರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಕೇಂದ್ರ ಸಚಿವೆಯರಾದ ಸುಷ್ಮಾ ಸ್ವರಾಜ್, ನಜ್ಮಾ ಹೆಫ್ತುಲ್ಲಾ, ಮನೇಕಾ ಗಾಂಧಿ, ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲಾದವರು ಭಾಗವಹಿಸಿದ್ದರು.

ನಿನ್ನೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಹಿಳೆಯರಿಗೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33ರಷ್ಟು ಮೀಸಲಾತಿ ನೀಡುವ ಸಂವಿಧಾನ ವಿಧಿ 108ನೇ ತಿದ್ದುಪಡಿ ಮಸೂದೆಯನ್ನು ಪುನಶ್ಚೇತನಗೊಳಿಸಬೇಕೆಂದು ಹೇಳಿದ್ದರು. ಕೇಂದ್ರ ಸರ್ಕಾರದ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನವನ್ನು ಶ್ಲಾಘಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT