ಅನುಪಮ್ ಖೇರ್ (ಸಂಗ್ರಹ ಚಿತ್ರ) 
ದೇಶ

ಕೇವಲ ಶ್ರೀಮಂತರು ಮತ್ತು ಪ್ರಸಿದ್ಧ ವ್ಯಕ್ತಿಗಳು ಅಸಹಿಷ್ಣುತೆ ಬಗ್ಗೆ ಮಾತನಾಡುತ್ತಾರೆ: ಅನುಪಮ್ ಖೇರ್

ನಮ್ಮ ದೇಶದಲ್ಲಿ ಕೇವಲ ಶ್ರೀಮಂತ ಮತ್ತು ಸುಪ್ರಸಿದ್ಧ ಜನರು ಮಾತ್ರ ಅಸಹಿಷ್ಣುತೆ ಬಗ್ಗೆ ಮಾತನಾಡುತ್ತಾರೆ. ಬಡವರು ತಮ್ಮ ಜೀವನ...

ಕೋಲ್ಕತ್ತಾ: ನಮ್ಮ ದೇಶದಲ್ಲಿ ಕೇವಲ ಶ್ರೀಮಂತ ಮತ್ತು ಸುಪ್ರಸಿದ್ಧ ಜನರು ಮಾತ್ರ ಅಸಹಿಷ್ಣುತೆ ಬಗ್ಗೆ ಮಾತನಾಡುತ್ತಾರೆ. ಬಡವರು ತಮ್ಮ ಜೀವನ ನಿರ್ವಹಣೆಯಲ್ಲಿ ತೊಡಗಿರುತ್ತಾರೆ ಎಂದು ಬಾಲಿವುಡ್ ನಟ ಅನುಪಮ್ ಖೇರ್ ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧವೂ ಲೇವಡಿ ಮಾಡಿದ್ದಾರೆ.

ಕೋಲ್ಕತ್ತಾದಲ್ಲಿ ಟೆಲಿಗ್ರಾಫ್ ರಾಷ್ಟ್ರೀಯ ಚರ್ಚಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂಬ ಬಗ್ಗೆ ದೇಶವ್ಯಾಪಿ ಚರ್ಚೆಗಳೇನು ನಡೆಯುತ್ತಿಲ್ಲ. ಅಸಂಬದ್ಧ ಬಲಪಂಥೀಯ ಅಂಶಗಳನ್ನು ಬಿಂಬಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ಕೂಡ ಅವರು ನಿರಾಕರಿಸಿದ್ದಾರೆ.

ಇದೊಂದು ಚರ್ಚಾಸ್ಪದ ವಿಷಯವೇ ಅಲ್ಲ. ಕೇವಲ ಶ್ರೀಮಂತರು ಮಾತ್ರ ಅಸಹಿಷ್ಣುತೆ ಬಗ್ಗೆ ಮಾತನಾಡುತ್ತಾರೆ. ರಸ್ತೆಯಲ್ಲಿ ಹೋಗುವವನೊಬ್ಬನಲ್ಲಿ ಅಸಹಿಷ್ಣುತೆ ಬಗ್ಗೆ ಕೇಳಿ, ಏನೂ ಹೇಳುವುದಿಲ್ಲ. ಅವರಿಗೆ ಬೇಕಾಗಿರುವುದು ದಿನಕ್ಕೆ ಎರಡು ಹೊತ್ತಿನ ಊಟವಷ್ಟೆ ಎಂದು ಹೇಳಿದರು.

ಕೈಯಲ್ಲಿ ಶಾಂಪೇನು ಗ್ಲಾಸು ಹಿಡಿದುಕೊಳ್ಳುವವರು ಮಾತ್ರ ಅಸಹಿಷ್ಣುತೆ ಎಂದು ಮಾತನಾಡಿಕೊಳ್ಳುತ್ತಾರೆ.ನೀವು ಭಾರತದಲ್ಲಿ ವಾಸಿಸುತ್ತಿದ್ದೀರಾ ಇಲ್ಲ ಅಮೆರಿಕದಲ್ಲಿಯೇ ಎಂದು ಖೇರ್ ಪ್ರಶ್ನಿಸಿದರು.

ನಮ್ಮ ದೇಶದಲ್ಲಿ ಅಸಹಿಷ್ಣುತೆ ಉಂಟಾಗಿದ್ದು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ, ಸರ್ಕಾರದ ವಿರುದ್ಧ ಮಾತನಾಡಿದವರನ್ನು ಜೈಲಿಗೆ ಕಳುಹಿಸುತ್ತಿದ್ದರಲ್ಲವೇ ಅದು ಅಸಹಿಷ್ಣುತೆ ಎಂದು ಅನುಪಮ್ ಖೇರ್ ಅಭಿಪ್ರಾಯಪಟ್ಟರು.

ರಾಹುಲ್ ಗಾಂಧಿಯವರನ್ನು ಪರೋಕ್ಷವಾಗಿ ಲೇವಡಿ ಮಾಡಿದ ಅನುಪಮ್ ಖೇರ್, ಭಾರತದಲ್ಲಿ ಕಾಂಗ್ರೆಸ್ ಪಕ್ಷ ತುಂಬಾ ಸಹಿಷ್ಣುವಾಗಿದೆ ಏಕೆಂದರೆ ಈ ದೇಶದ ಪ್ರಧಾನಿಯಾಗಬೇಕೆಂದು ಅವರು ಬಿಂಬಿಸುವ ವ್ಯಕ್ತಿಯನ್ನು ಅವರು ಸಹಿಸುತ್ತಾ ಬಂದಿದ್ದಾರೆ. ನೀವು ಅವರನ್ನು ಸಹಿಸಿಕೊಂಡಿದ್ದೀರಿ ಎಂದರೆ ಈ ಪ್ರಪಂಚದಲ್ಲಿ ಯಾವದನ್ನು ಬೇಕಾದರೂ ಸಹಿಸಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT