ಸಾಂದರ್ಭಿಕ ಚಿತ್ರ 
ದೇಶ

ರಾವಿ ನದಿಯಲ್ಲಿ ಕೊಚ್ಚಿಹೋದ ಪಠಾನ್ ಕೋಟ್ ವಾಯುನೆಲೆಯ ಇಬ್ಬರು ಐ ಎ ಎಫ್ ಯೋಧರು

ಹಿಮಾಚಲ ಪ್ರದೇಶದ ಚಂಬಾ ಬಳಿ ರಾವಿ ನದಿಯ ನೀರಿನ ಪ್ರಮಾಣದಲ್ಲಿ ಅನಿರೀಕ್ಷಿತ ಏರಿಕೆ ಕಂಡಿದ್ದರಿಂದ ಪಠಾನ್ ಕೋಟ್ ವಾಯುನೆಲೆಯ ಇಬ್ಬರು ಐ ಎ ಎಫ್ ಸೈನಿಕರು

ಚಂಡೀಘರ್: ಹಿಮಾಚಲ ಪ್ರದೇಶದ ಚಂಬಾ ಬಳಿ ರಾವಿ ನದಿಯ ನೀರಿನ ಪ್ರಮಾಣದಲ್ಲಿ ಅನಿರೀಕ್ಷಿತ ಏರಿಕೆ ಕಂಡಿದ್ದರಿಂದ ಪಠಾನ್ ಕೋಟ್ ವಾಯುನೆಲೆಯ ಇಬ್ಬರು ಐ ಎ ಎಫ್ ಸೈನಿಕರು ಶನಿವಾರ ಸಂಜೆ ಕೊಚ್ಚಿಹೋಗಿದ್ದಾರೆ. ಈ ಘಟನೆಯಲ್ಲಿ ಮೂವರು ಸೈನಿಕರು ಕೂಡ ಗಾಯಗೊಂಡಿದ್ದಾರೆ.

ಕೊಚ್ಚಿಹೋದ ಸೈನಿಕರನ್ನು ಮೀರತ್ ನ ೨೬ ವರ್ಷದ ನಿತೇಶ್ ಮಿಶ್ರಾ ಮತ್ತು ಜೈಪುರದ ೩೦ ವರ್ಷದ ಶಕ್ತಿ ಸಿಂಗ್ ಎಂದು ಗುರುತಿಸಲಾಗಿದ್ದು, ಭಾನುವಾರ ಬೆಳಗ್ಗೆ ಅವರ ದೇಶವನ್ನು ಪತ್ತೆಹಚ್ಚಲಾಗಿದ್ದು, ಶವಪರೀಕ್ಷೆಗೆ ಕಳುಹಿಸಲಾಗಿದೆ. ಶೀಘ್ರದಲ್ಲಿ ದೇಹವನ್ನು ಅವರ ಕುಟುಂಬಗಳ ವಶಕ್ಕೆ ಕೊಡಲಾಗುವುದು ಎಂದು ತಿಳಿದುಬಂದಿದೆ.

ಇನ್ನೂ ಮೂವರು ಈಜಾಡಿ ಪ್ರಾಣ ಉಳಿಸಿಕೊಂಡಿದ್ದು, ಅವರಿಗೆ ಪ್ರಾದೇಶಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರುಗಳು ನಾವಲ್ ಪಾಂಡೆ, ನವೀನ್ ಶರ್ಮಾ ಮತ್ತು ಗಜೇಂದರ್ ಸಿಂಗ್ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೈಡ್ರೋ ಇಂಧನ ಕಾರ್ಪೊರೇಶನ್(ಎನ್ ಎಚ್ ಪಿ ಸಿ) ಚಮೇರಾ ಅಣೆಕಟ್ಟಿನಿಂದ ಅನಿರಿಕ್ಷಿತವಾಗಿ ನೀರು ಬಿಡುಗಡೆ ಮಾಡಿದ್ದರಿಂದ ನದಿಯ ನೀರಿನ ಮಟ್ಟ ಏರಿ ಈ ದುರ್ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ.

ಎನ್ ಎಚ್ ಪಿ ಸಿ ಯ ಸೈರನ್ ಈ ಸೈನಿಕರಿಗೆ ಕೇಳಿಸಲಿಲ್ಲ ಎಂದು ದೂರಲಾಗಿದ್ದು, ಈ ಘಟನೆಯ ತನಿಖೆಗೆ ಆದೇಶಿಸಲಾಗಿದೆ.

"ಈ ಐದು ಜನ ಸೈನಿಕರು ರಜೆಯಲ್ಲಿದ್ದರು ಮತ್ತು ಅವರು ತಮ್ಮ ಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದಾಗ, ಅನಿರೀಕ್ಷಿತವಾಗಿ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಇಬ್ಬರು ಕೊಚ್ಚಿ ಹೋಗಿದ್ದಾರೆ" ಎಂದು ಚಂಬಾದ ಸಹ ನಿರ್ದೇಶಕ ಸುದೇಶ್ ಮೊಖ್ತಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?