ಐಎನ್ ಎಸ್ ವಿರಾಟ್ ನಲ್ಲಿ ಅಗ್ನಿ ಅವಘಡ (ಸಂಗ್ರಹ ಚಿತ್ರ) 
ದೇಶ

ಐಎನ್ ಎಸ್ ವಿರಾಟ್ ಸಮರ ನೌಕೆಯಲ್ಲಿ ಬೆಂಕಿ ಆಕಸ್ಮಿಕ: ಓರ್ವ ನಾವಿಕನ ಸಾವು

ಭಾರತೀಯ ನೌತಾಪಡೆಗೆ ಸೇರಿದ ಯುದ್ಧ ನೌಕೆ ಐಎನ್ ಎಸ್ ವಿರಾಟ್ ಅಲ್ಲಿ ಸಂಭವಸಿದ ಅಗ್ನಿ ಆಕಸ್ಮಿಕದಿಂದಾಗಿ ಓರ್ವ ನಾವಿಕ ಸಾವನ್ನಪ್ಪಿದ ಘಟನೆ ಗೋವಾದಲ್ಲಿ ನಡೆದಿದೆ...

ನವದೆಹಲಿ: ಭಾರತೀಯ ನೌತಾಪಡೆಗೆ ಸೇರಿದ ಯುದ್ಧ ನೌಕೆ ಐಎನ್ ಎಸ್ ವಿರಾಟ್ ಅಲ್ಲಿ ಸಂಭವಸಿದ ಅಗ್ನಿ ಆಕಸ್ಮಿಕದಿಂದಾಗಿ ಓರ್ವ ನಾವಿಕ ಸಾವನ್ನಪ್ಪಿದ ಘಟನೆ ಗೋವಾದಲ್ಲಿ ನಡೆದಿದೆ.

ಗೋವಾದ ಕರಾವಳಿ ತೀರದಲ್ಲಿ ನಿಯೋಜನೆಗೊಂಡಿದ್ದ ಐಎನ್ ಎಸ್ ವಿರಾಟ್ ಯುದ್ಧ ನೌಕೆಯಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ನೌಕೆಯಾದ್ಯಂತ ಭಾರಿ ಪ್ರಮಾಣದ ಹೊಗೆ  ಆವರಿಸಿತ್ತು. ಈ ಅವಘಡದಲ್ಲಿ ನೌಕೆಯಲ್ಲಿದ್ದ ನಾವಿಕ ಮತ್ತು ಮುಖ್ಯ ಇಂಜಿನಿಯರ್ ಅಶು ಸಿಂಗ್ ಅವರು ಸಾವನ್ನಪ್ಪಿದ್ದು, ನೌಕೆಯಲ್ಲಿರುವ ಇತರೆ ಮೂವರು ನಾವಿಕರು ಉಸಿರಾಟ ತೊಂದರೆ  ಅನುಭವಿಸಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ನೌಕೆಯ ಬಾಯ್ಲರ್ ಕೊಠಡಿಯಲ್ಲಿ ಅನಿಲ ಸೋರಿಕೆಯಿಂದ ಕಾಣಿಸಿಕೊಂಡ ಬೆಂಕಿಯಿಂದ ನೌಕೆಯಾದ್ಯಂತ ದಟ್ಟ ಹೊಗೆ ಆವರಿಸಿತು. ವಿಷಯ ತಿಳಿದ ತಕ್ಷಣ ಪರಿಸ್ಥಿತಿ ನಿಯಂತ್ರಣಕ್ಕೆ  ತರಲಾಯಿತು ಎಂದು ನೌಕಾದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಅಶು ಸಿಂಗ್​ರನ್ನು ಗೋವಾ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು  ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದರು.

ಕಳೆದ 60 ವರ್ಷಗಳಿಂದ ಐಎನ್​ಎಸ್ ವಿರಾಟ್ ಭಾರತ ನೌಕಾದಳದ ಮುಖ್ಯ ನೌಕೆಗಳಲ್ಲಿ ಒಂದಾಗಿದ್ದು, ಈ ವರ್ಷಾಂತ್ಯದ ವೇಳೆಗೆ ನಿವೃತ್ತಿ ಹೊಂದಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT