ಆದರ್ಶ್ ಶರ್ಮಾ ಹಂಚಿದ ಕರಪತ್ರ 
ದೇಶ

ಕನಯ್ಯಾನಿಗೆ ಗುಂಡಿಟ್ಟರೆ ರು. 11 ಲಕ್ಷ ಇನಾಮು ನೀಡುತ್ತೇನೆ ಎಂದವನ ಬ್ಯಾಂಕ್ ಬ್ಯಾಲೆನ್ಸ್ ರು. 150!

ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಗಳ ಮುಖಂಡ ಕನಯ್ಯಾ ಕುಮಾರ್ ಅವರಿಗೆ ಗುಂಡಿಟ್ಟರೆ ರು. 11 ಲಕ್ಷ ಇನಾಮು ಕೊಡುತ್ತೇನೆ...

ನವದೆಹಲಿ: ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಗಳ ಮುಖಂಡ ಕನಯ್ಯಾ ಕುಮಾರ್ ಅವರಿಗೆ ಗುಂಡಿಟ್ಟರೆ ರು. 11 ಲಕ್ಷ ಇನಾಮು ಕೊಡುತ್ತೇನೆ ಎಂದು ಘೋಷಿಸಿದ್ದ ಪೂರ್ವಾಂಚಲ್ ಸೇನಾ ಅಧ್ಯಕ್ಷ ಆದರ್ಶ್ ಶರ್ಮಾ ಅವರ ಬ್ಯಾಂಕ್ ಬ್ಯಾಲೆನ್ಸ್  ಎಷ್ಟು ಗೊತ್ತಾ? ರು. 150 !
ರೋಹಿಣಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿರುವ ಶರ್ಮಾ, ಹಲವಾರು ತಿಂಗಳಿನಿಂದ ಬಾಡಿಗೆಯನ್ನೂ ಪಾವತಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಕನಯ್ಯಾ ಅವರನ್ನು ಹತ್ಯೆ ಮಾಡಿದರೆ ಪೂರ್ವಾಂಚಲ್ ಸೇನೆ ವತಿಯಿಂದ ರು. 11 ಲಕ್ಷ ಬಹುಮಾನವನ್ನು ನೀಡಲಾಗುವುದು ಎಂದು ಬರೆದ ಕರಪತ್ರವನ್ನು ಶರ್ಮಾ ಹಂಚಿದ್ದರು. ಈ ರೀತಿ ಕರಪತ್ರ ಹಂಚುದುದಕ್ಕಾಗಿ ಪೊಲೀಸರು ಈತನ ವಿರುದ್ಧ ಕೇಸು ದಾಖಲಿಸಿದ್ದರು.
ಕೇಸು ದಾಖಲಾದ ನಂತರ ಶರ್ಮಾ ತಲೆ ಮರೆಸಿಕೊಂಡಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT