ವಿಶ್ವ ಸಾಂಸ್ಕೃತಿಕ ಉತ್ಸವದ ಕಟೌಟ್ 
ದೇಶ

ರವಿಶಂಕರ್ ಗುರೂಜಿಯ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ರಾಷ್ಟ್ರಪತಿ ಗೈರು

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೆಹಲಿಯ ಯಮುನಾ ನದಿಯ ದಂಡೆಯ ಮೇಲೆ ಶ್ರೀ ಶ್ರೀ ರವಿಶಂಕರ್‌ ಗುರೂಜಿ ಅವರ "ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ...

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೆಹಲಿಯ ಯಮುನಾ ನದಿಯ ದಂಡೆಯ ಮೇಲೆ ಶ್ರೀ ಶ್ರೀ ರವಿಶಂಕರ್‌ ಗುರೂಜಿ ಅವರ 'ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಆಯೋಜಿಸಿರುವ 'ವಿಶ್ವ ಸಾಂಸ್ಕೃತಿಕ ಉತ್ಸವ'ದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ವಿಶ್ವ ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಸೂಚಿಸಿದ್ದರು. ಆದರೆ ಕಾರ್ಯಕ್ರಮದಿಂದಾಗಿ ಪರಿಸರಕ್ಕೆ ಹಾನಿಯಾಗಲಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ಆದರೆ ಈಗಾಗಲೇ ಪ್ರಧಾನಿ, ರಾಷ್ಟ್ರಪತಿ ಹಾಗೂ ರವಿಶಂಕರ್ ಗುರೂಜಿ ಭಾವಚಿತ್ರ ಒಳಗೊಂಡ ಕಟೌಟ್ ಗಳು ದೆಹಲಿಯಾದ್ಯಂತ ರಾರಾಜಿಸುತ್ತಿವೆ.
ಈ ಮಧ್ಯೆ ಕಾರ್ಯಕ್ರಮದಿಂದ ಪರಿಸರ ಹಾನಿಯಾಗತ್ತದೆ ಎಂಬ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ರವಿಶಂಕರ್ ಗುರೂಜಿ, ಈ ಉತ್ಸವ ವಿಶ್ವ ಶಾಂತಿಗೆ ಪ್ರಚಾರ ನೀಡಲಿದೆ. ಹೀಗಾಗಿ ಪರಿಸರ ಕಾರಣ ನೀಡುವುದು ಸರಿಯಲ್ಲ ಎಂದಿದ್ದಾರೆ.
ಮಾ.11ರಿಂದ 13ರ ವರೆಗೆ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ಯಮುನಾ ದಂಡೆಯ ಮೇಲೆ ಬೃಹತ್‌ ವೇದಿಕೆ ಸಿದ್ಧಪಡಿಸಿದ್ದು, ಟೆಂಟ್‌ ಮತ್ತು ರಸ್ತೆಗಳನ್ನು ನಿರ್ಮಾಣಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ