ಕನ್ಹಯ್ಯ ಕುಮಾರ್ 
ದೇಶ

ಕನ್ಹಯ್ಯ ಕುಮಾರ್ ಪ್ರಚಾರ ಪಡೆಯಲು ಬಿಟ್ಟಿರುವುದಕ್ಕೆ ಬಿಜೆಪಿ ವಿರುದ್ಧ ಶಿವಸೇನೆ ಅಸಮಾಧಾನ

ಜೆ ಎನ್ ಯ ವಿವಿಯಲ್ಲಿ ದೇಶವಿರೋಧಿ ಘೋಷಣೆ ಪ್ರಕರಣದ ಮೂಲಕ ಬೆಳಕಿಗೆ ಬಂದ ಕನ್ಹಯ್ಯ ಕುಮಾರ್ ನನ್ನು ಬಿಟ್ಟಿ ಪ್ರಚಾರ ಪಡೆಯಲು ಬಿಜೆಪಿ ಅವಕಾಶ ನೀಡಿದೆ ಎಂದು ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದೆ.

ಮುಂಬೈ: ಜೆ ಎನ್ ಯ ವಿವಿಯಲ್ಲಿ ದೇಶವಿರೋಧಿ ಘೋಷಣೆ ಪ್ರಕರಣದ ಮೂಲಕ ಬೆಳಕಿಗೆ ಬಂದ ಕನ್ಹಯ್ಯ ಕುಮಾರ್ ನನ್ನು ಬಿಟ್ಟಿ ಪ್ರಚಾರ ಪಡೆಯಲು ಬಿಜೆಪಿ ಅವಕಾಶ ನೀಡಿದೆ ಎಂದು ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದೆ. 
ದೇಶದ್ರೋಹ ಆರೋಪ ಎದುರಿಸುತ್ತಿರುವ ಅನೇಕರು ಇನ್ನೂ ಜೈಲಿನಲ್ಲೇ ಇರಬೇಕಾದರೆ ಕನ್ಹಯ್ಯ ಕುಮಾರ್ ಗೆ ಶೀಘ್ರವೇ ಜಾಮೀನು ಪಡೆಯುವುದು ಹೇಗೆ ಸಾಧ್ಯವಾಯಿತು ಎಂದು ಶಿವಸೇನೆ ಪ್ರಶ್ನಿಸಿದೆ. ಕನ್ಹಯ್ಯ ಕುಮಾರ್ ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾನೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದರು ಅದಕ್ಕೆ ಯಾರು ಕಾರಣ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರಶ್ನಿಸಿದೆ.
ಸಣ್ಣ ವಸ್ತುಗಳಿಗೂ ಸಹ ಹಣ ಪಾವತಿ ಮಾಡಿ ಪಡೆಯಬೇಕಾಗುತ್ತದೆ. ಮಧ್ಯಮ ವರ್ಗದ ಜನರು ಪಿಎಫ್ ನಲ್ಲಿ ಉಳಿಸುತ್ತಿದ್ದ ಹಣಕ್ಕೂ ತೆರಿಗೆ ಕಟ್ಟಬೇಕಾದ ಸ್ಥಿತಿ ಎದುರಾಗಿದೆ. ಪಟೇಲ್ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಹಾರ್ದಿಕ್ ಪಟೇಲ್ ರಾಷ್ಟ್ರದ್ರೋಹದ ಆರೋಪದಡಿ ಇನ್ನೂ ಜೈಲಿನಲ್ಲೇ ಇದ್ದಾನೆ ಎನ್ನಲಾಗುತ್ತಿದೆ, ಇನ್ನು ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಞಾ ಅವರದ್ದೂ ಇದೇ ಸ್ಥಿತಿ. ಆದರೆ ಕನ್ಹಯ್ಯ ಕುಮಾರ್ ಗೆ ಹೇಗೆ ಜಾಮೀನು ಪಡೆಯುವುದು ಸಾಧ್ಯವಾಯಿತು ಎಂದು ಶಿವಸೇನೆ ಬಿಜೆಪಿಯನ್ನು ಕೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT