ರಾಜೀವ್ ಗಾಂಧಿ ಹಂತಕಿ ನಳಿನಿ (ಸಂಗ್ರಹ ಚಿತ್ರ) 
ದೇಶ

ರಾಜೀವ್ ಹಂತಕಿ ನಳಿನಿಗೆ 1 ದಿನದ ಪೆರೋಲ್

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಆಜೀವ ಜೈಲು ಶಿಕ್ಷೆಗೆ ಗುರಿಯಾಗಿರುವ ನಳಿನಿ ಶ್ರೀಹರನ್ ಗೆ ನ್ಯಾಯಾಲಯ 24 ಗಂಟೆಗಳ ಪೆರೋಲ್ ಮಂಜೂರು ಮಾಡಿದೆ...

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಆಜೀವ ಜೈಲು ಶಿಕ್ಷೆಗೆ ಗುರಿಯಾಗಿರುವ ನಳಿನಿ ಶ್ರೀಹರನ್ ಗೆ ನ್ಯಾಯಾಲಯ 24 ಗಂಟೆಗಳ ಪೆರೋಲ್  ಮಂಜೂರು ಮಾಡಿದೆ.

ಕಳೆದ ತಿಂಗಳು ಮೃತರಾದ ನಳಿನಿ ತಂದೆಯ ಪುಣ್ಯತಿಥಿ ಇದೇ ಮಾರ್ಚ್ 9ರಂದು ನೆರವೇರಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 3 ದಿನಗಳ ಪೆರೋಲ್ ನೀಡಬೇಕು ಎಂದು ನಳಿನಿ ಪರ  ವಕೀಲರು ಮದ್ರಾಸ್ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ 1 ದಿನದ ಮಟ್ಟಿಗೆ ನಳಿನಿಗೆ ಪೆರೋಲ್ ಮಂಜೂರು ಮಾಡಿದೆ.

ಮಾರ್ಚ್ 2ರಂದೇ ಜೈಲಿನಿಂದ ನಳಿನಿ ಅರ್ಜಿ ಸಲ್ಲಿಸಿದ್ದು, ವೆಲ್ಲೂರು ಜೈಲಿನ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ನಳಿನಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ  ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನಳಿನಿಗೆ 24 ಗಂಟೆಗಳ ಪೆರೋಲ್ ಮಂಜೂರು ಮಾಡಿದೆ. ನಳಿನಿ ತಂದೆ ಶಂಕರನಾರಾಯಣ ಅವರು ನಿಧನರಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ 24  ರಂದು ನಳಿನಿಗೆ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಳ್ಳಲು ನ್ಯಾಯಾಲಯ 12 ಗಂಟೆಗಳ ಪೆರೋಲ್ ನೀಡಿತ್ತು.

ನಳಿನಿ ತಂದೆ ಶಂಕರನಾರಾಯಣನ್ ಅವರ 16ನೇ ದಿನದ ಪುಣ್ಯತಿಥಿ ಇದೇ ಮಾರ್ಚ್ 9ರಂದು ಕೊಟ್ಟೂರಿನಲ್ಲಿ ನಡೆಯಲಿದೆ.

ತಮಿಳುನಾಡಿನ ಶ್ರೀಪೆರಂಬದೂರ್ ನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಎಲ್ ಟಿಟಿಇ ಸಂಘಟನೆ ಆತ್ಮಹತ್ಯಾ ಬಾಂಬ್ ದಾಳಿ  ಮೂಲಕ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ಬಂಧಿತರಾಗಿದ್ದ ನಳಿನಿ ಮತ್ತು ಇತರೆ ಸಹಚರರಿಗೆ ನ್ಯಾಯಾಲಯ 1998 ಜನವರಿ 24ರಂದು ಮರಣದಂಡನೆ ಶಿಕ್ಷೆ ವಿಧಿಸಿತ್ತು. ತಮಿಳುನಾಡು  ರಾಜ್ಯಪಾಲರು 2000 ಏಪ್ರಿಲ್ 24ರಂದು ನಳಿನಿ ಶಿಕ್ಷೆಯನ್ನು ಮರಣದಂಡನೆಯಿಂದ ಜೀವಾವಧಿ ಶಿಕ್ಷೆಗೆ ಮಾರ್ಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT