ವಿಜಯ್ ಮಲ್ಯ (ಸಂಗ್ರಹ ಚಿತ್ರ) 
ದೇಶ

ಭಾರತ ಬಿಡುವ ಮಲ್ಯನನ್ನು ತಡೆಯಿರಿ: ಸುಪ್ರೀಂಗೆ ಬ್ಯಾಂಕ್'ಗಳ ಮನವಿ

ಭಾರತ ಬಿಟ್ಟು ಹೋಗಲಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ತಡೆಯುವಂತೆ ಕೋರಿ ಖಾಸಗಿ ವಲಯದ ಬ್ಯಾಂಕ್ ಗಳು ಮಂಗಳವಾರ ಸುಪ್ರೀಂಕೋರ್ಟ್ ಮೊರೆಹೋಗಿದೆ...

ನವದೆಹಲಿ; ಭಾರತ ಬಿಟ್ಟು ಹೋಗಲಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ತಡೆಯುವಂತೆ ಕೋರಿ ಖಾಸಗಿ ವಲಯದ ಬ್ಯಾಂಕ್ ಗಳು ಮಂಗಳವಾರ ಸುಪ್ರೀಂಕೋರ್ಟ್ ಮೊರೆಹೋಗಿದೆ.

ಯುನೈಟೆಡ್ ಸ್ಪಿರಿಟ್ಸ್ ನ ಕಾರ್ಯ ನಿರ್ವಹಣೇತರ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ತಮ್ಮ ಸಮಯವನ್ನು ಬ್ರಿಟನ್ ನಲ್ಲಿರುವ ಮಕ್ಕಳ ಜೊತೆ ಕಳೆಯಲಿಚ್ಛಿಸುತ್ತೇನೆಂದು ಈ ಹಿಂದೆ ಮಲ್ಯ ಅವರು ಹೇಳಿದ್ದರು. ಇದೀಗ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಾರ್ವಜನಿಕ ವಲಯದ ಬ್ಯಾಂಕ್ ಗಳು ಭಾರತ ಬಿಟ್ಟು ಹೋಗಲಿರುವ ಮಲ್ಯ ಅವರನ್ನು ತಡೆಯುವಂತೆ ಇದೀಗ ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯೊಂದನ್ನು ಸಲ್ಲಿಸಿದೆ. ಈ ಅರ್ಜಿಯನ್ನು ಸುಪ್ರೀಂ ನಾಳೆ ಪರಿಶೀಲನೆ ನಡೆಸುವುದಾಗಿ ಹೇಳಲಾಗುತ್ತಿದೆ.

ಕಿಂಗ್ ಆಫ್ ಗುಡ್ ಟೈಮ್ಸ್ ಎಂದೇ ಖ್ಯಾತಿ ಪಡೆದಿದ್ದ ಮಲ್ಯ ಅವರ ಮೇಲೆ ಬ್ಯಾಂಕ್ ಗಳ ವಕ್ರದೃಷ್ಟಿ ಬಿದ್ದಿದೆ. ತಲೆಯ ಮೇಲೆ ಸಾವಿರಾರು ಕೋಟಿ ರುಪಾಯಿ ಸಾಲ ಇದ್ದರೂ ಕೂಡ ಸದಾ ಕಾಲ ಮೋಜು, ಮಸ್ತಿ ಎಂದು ಕಾಲ ಕಳೆಯುತ್ತಿದ್ದ ಮಲ್ಯ ಅವರಿಗೆ ಇದೀಗ ಅವರೇ ಮಾಡಿಕೊಂಡ ಸಾಲ ತೂಗು ಕತ್ತಿಯಾಗಿ ಪರಿಣಮಿಸಿದೆ. ಒಂದು ಕಡೆ ಎಸ್ ಬಿಐ, ಸಾಲ ವಸೂಲಾತಿ ನ್ಯಾಯಾಧಿಕರಣದ ಮೂಲಕ ಡಿಯಾಜಿಯೋದಿಂದ ಬರಬೇಕಿದ್ದ ಹಣಕ್ಕೆ ತಡೆ ಒಡ್ಡಿದ್ದರೆ, ಮತ್ತೊಂದೆ ಐಡಿಬಿಐ ಬ್ಯಾಂಕ್ ಜಾರಿ ನಿರ್ದೇಶನಾಲಯದ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಡಿ ಮಲ್ಯ ಅವರು ಎತ್ತಲೂ ಹೋಗದಂತೆ ಕಟ್ಟಿ ಹಾಕಿದೆ. ಇದೀಗ ಖಾಸಗಿ ವಲ್ಯದ ಬ್ಯಾಂಕ್ ಗಳು ಸುಪ್ರೀಂ ನಲ್ಲಿ ಅರ್ಜಿಯನ್ನು ಸಲ್ಲಿಸಿದ್ದು, ಮಲ್ಯ ಭಾರತ ಬಿಟ್ಟು ಹೋಗದಂತೆ ನಿಲ್ಲಿಸುವಂತೆ ಮನವಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT