ಯಮುನಾ ನದಿ ತೀರದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಶೆಡ್ ಗಳು 
ದೇಶ

ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮ: ರಾಜ್ಯಸಭೆಯಲ್ಲಿ ಗದ್ದಲ, ಕೋಲಾಹಲ

ಯಮುನಾ ನದಿ ತೀರದಲ್ಲಿ ಶ್ರೀ ಶ್ರೀ ರವಿಶಂಕರ ಗುರೂಜಿಯವರ ನೇತೃತ್ವದಲ್ಲಿ ನಾಡಿದ್ದು ಶುಕ್ರವಾರದಿಂದ ನಡೆಯಲಿರುವ ಆರ್ಟ್ ಆಫ್ ಲಿವಿಂಗ್ ನ...

ನವದೆಹಲಿ: ಯಮುನಾ ನದಿ ತೀರದಲ್ಲಿ ಶ್ರೀ ಶ್ರೀ ರವಿಶಂಕರ ಗುರೂಜಿಯವರ ನೇತೃತ್ವದಲ್ಲಿ ನಾಡಿದ್ದು ಶುಕ್ರವಾರದಿಂದ ನಡೆಯಲಿರುವ ಆರ್ಟ್ ಆಫ್ ಲಿವಿಂಗ್ ನ ಮೂರು ದಿನಗಳ ವಿಶ್ವ ಸಾಂಸ್ಕೃತಿಕ ಹಬ್ಬದ ಕುರಿತಂತೆ ಇಂದು ಸದನದಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ತೀವ್ರ ಗದ್ದಲ, ಕೋಲಾಹಲವುಂಟಾಯಿತು.

ಆರ್ಟ್ ಆಫ್ ಲಿವಿಂಗ್ ನ ಖಾಸಗಿ ಕಾರ್ಯಕ್ರಮಕ್ಕೆ ಭದ್ರತೆಗೆಂದು ಸೇನಾಪಡೆ ನಿಯೋಜಿಸಿರುವುದನ್ನು ಪ್ರತಿಪಕ್ಷಗಳು ವಿರೋಧಿಸಿವೆ. ಇಂದು ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಜೆಡಿಯುನ ಶರದ್ ಯಾದವ್ ವಿಷಯ ಪ್ರಸ್ತಾಪಿಸಿದರು.

 ಇದಕ್ಕೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಭದ್ರತೆಯ ಕಾರಣಕ್ಕಾಗಿ ಸೇನಾಪಡೆಯನ್ನು ನಿಯೋಜಿಸಲಾಗಿದೆ ಎಂದರು.
ಕಾಂಗ್ರೆಸ್ ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಮಾತನಾಡಿ, ದೆಹಲಿ ಪೊಲೀಸರು ಕೂಡ ಭದ್ರತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವುದರಿಂದ ತಮಗೆ ಕಾರ್ಯಕ್ರಮದ ಬಗ್ಗೆ ತೀವ್ರ ಆತಂಕವಿದೆ ಎಂದರು.

ಅದಕ್ಕೆ ಉತ್ತರಿಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಹಸಿರು ನ್ಯಾಯಾಧೀಕರಣ ವಿಚಾರಣೆ ನಡೆಸುತ್ತಿರುವಾಗ ನಾವಿಲ್ಲಿ ಆ ವಿಷಯದ ಕುರಿತು ಚರ್ಚೆ ನಡೆಸುವುದು ಸೂಕ್ತವಲ್ಲ. ಸಂವಿಧಾವ ವಿಧಿ 69ರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು. ಇದಕ್ಕೆ ವಿರೋಧಪಕ್ಷದ ಸದಸ್ಯರು ತೃಪ್ತರಾಗಲಿಲ್ಲ.

ತಾತ್ಕಾಲಿಕ ಶೆಡ್ ನಿರ್ಮಾಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಸಲ್ಲಿಸಲಾಗಿರುವ ಮನವಿ ಕುರಿತಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಇಂದು ಮಧ್ಯಾಹ್ನ ತೀರ್ಪು ನೀಡುವ ಸಾಧ್ಯತೆಯಿದೆ.

ನ್ಯಾಯಾಧಿಕರಣದ ಅಧ್ಯಕ್ಷ ಸ್ವಂತತೆರ್ ಕುಮಾರ್ ಅವರಿದ್ದ ಪೀಠ, ಅರಣ್ಯ ಮತ್ತು ಪರಿಸರ ಸಚಿವಾಲಯದಲ್ಲಿ ಅಫಿದವಿಟ್ಟು ಸಲ್ಲಿಸುವಂತೆ ಮತ್ತು ತಾತ್ಕಾಲಿಕ ಶೆಡ್ ನಿರ್ಮಾಣಕ್ಕೆ ಯಾಕೆ ಸಚಿವಾಲಯದ ಅನುಮತಿ ಬೇಕಾಗಿಲ್ಲ ಎಂಬುದನ್ನು ವಿವರಿಸುವಂತೆ ಸೂಚಿಸಿದೆ.


ಪರಿಸರ ಸಚಿವಾಲಯದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿ ಯಾವುದೇ ಕೊಳಕು, ತ್ಯಾಜ್ಯ ವಸ್ತುಗಳನ್ನು ಕಂಡಿಲ್ಲ. ಸ್ಥಳ ಸ್ವಚ್ಛವಾಗಿತ್ತು  ಎಂದು ವರದಿ ನೀಡಿದೆ. ಪರಿಸರ ಪರಿಣಾಮ ವಿಶ್ಲೇಷಣೆ ಅಧಿಸೂಚನೆ 2006ರ ಪ್ರಕಾರ, ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಪರಿಸರ ಸಚಿವಾಲಯದ ಅನುಮತಿ ಬೇಕಾಗಿಲ್ಲ ಎಂದಿದೆ. ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕೆ, ಬೇಡವೇ ಎಂಬ ಬಗ್ಗೆ ಇಂದು ನ್ಯಾಯಾಧೀಕರಣ ತೀರ್ಪು ನೀಡುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT