ಕೇರಳಕ್ಕೆ ಬಂದ ಮೊದಲ ದಿನವೇ ಕೋಟಿ ರೂ ಲಾಟರಿ ಬಹುಮಾನ ಗೆದ್ದ ಬಂಗಾಳದ ಯುವಕ! 
ದೇಶ

ಕೇರಳಕ್ಕೆ ಬಂದ ಮೊದಲ ದಿನವೇ ಕೋಟಿ ರೂ ಲಾಟರಿ ಬಹುಮಾನ ಗೆದ್ದ ಬಂಗಾಳದ ಯುವಕ!

ಪಶ್ಚಿಮ ಬಂಗಾಳದಿಂದ ಕೆಲಸ ಅರಸಿ ಕೇರಳಕ್ಕೆ ಬಂದ ವ್ಯಕ್ತಿಯೊಬ್ಬನ ಅದೃಷ್ಟ ಒಂದೇ ದಿನದಲ್ಲಿ ಬದಲಾಗಿದೆ.

ಕೋಯಿಕ್ಕೋಡ್: ಪಶ್ಚಿಮ ಬಂಗಾಳದಿಂದ ಕೆಲಸ ಅರಸಿ ಕೇರಳಕ್ಕೆ ಬಂದ ವ್ಯಕ್ತಿಯೊಬ್ಬನ ಅದೃಷ್ಟ ಒಂದೇ ದಿನದಲ್ಲಿ ಬದಲಾಗಿದೆ. ಕೆಲಸ ಹುಡುಕಲು ಬಂದ ವ್ಯಕ್ತಿಗೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಲಾಟರಿ ಬಹುಮಾನ ದೊರೆತಿದೆ.
ಮೊಫಿಜುಲ್ ರೆಹಮಾನ್ ಶೇಖ್ ಎಂಬ ಯುವಕ ಕೇರಳಕ್ಕೆ ಬಂದೊಂಡನೆಯೇ ಲಾಟರಿ ಟಿಕೆಟ್ ಖರೀದಿಸಿದ್ದಾನೆ, ಮುಂದಿನ ದಿನ ಆತ ಖರೀದಿಸಿದ್ದ ಲಾಟರಿ ಟಿಕೆಟ್ ಗೇ ಒಂದು ಕೋಟಿ ರೂ ಬಹುಮಾನ ಘೋಷಣೆಯಾಗಿದೆ. ಲಾಟರಿಯಲ್ಲಿ ವಿಜೇತನಾಗಿ ಘೋಷಣೆಯಾದಾಗಿನಿಂದ ಆತ ಚೆವಾಯೂರ್ ಪೊಲೀಸ್ ಠಾಣೆಯಲ್ಲೇ ಆಶ್ರಯ ಪಡೆದಿದ್ದಾನೆ.
ಮಾ.4 ರಂದು ಕೇರಳಕ್ಕೆ ಬಂದಿದ್ದ ರೆಹಮಾನ್ ಶೇಖ್, 50 ರೂಪಾಯಿಗೆ ಲಾಟರಿ ಟಿಕೆಟ್ ಖರೀದಿಸಿದ್ದ, ಆದರೆ ಮಾ.5 ರಂದು ಅದೇ ಟಿಕೆಟ್ ಗೆ ಒಂದು ಕೋಟಿ ರೂ ಬಹುಮಾನ ಬಂದಿರುವುದು ಆತನಿಗೂ ಅಚ್ಚರಿ ಮೂಡಿಸಿದೆ. ಕೇರಳಕ್ಕೆ ಬಂದು ಕೆಲವು ತಿಂಗಳುಗಳು ಕೆಲಸ ಮಾಡಿ ವಾಪಸ್ ಹೋಗುವುದಷ್ಟೇ ನನ್ನ ಉದ್ದೇಶವಾಗಿತ್ತು. ಆದರೆ ಲಾಟರಿ ಬಹುಮಾನ ನನಗೆ ಅಚ್ಚರಿ ಮೂಡಿಸಿದೆ ಎಂದು ರೆಹಮಾನ್ ಶೇಖ್ ತಿಳಿಸಿದ್ದಾರೆ.
ಬಂಗಾಳದಲ್ಲೂ ನಾನು ಲಾಟರಿ ಟಿಕೆಟ್ ಖರೀದಿಸುತ್ತಿದ್ದೆ. ಆದರೆ ಗೆದ್ದಿರುವುದು ಇದೇ ಮೊದಲ ಬಾರಿಗೆ, ಈ ಹಣದಲ್ಲಿ ಮನೆ ಹಾಗೂ ಕೃಷಿ ಭೂಮಿಯನ್ನು ಖರೀದಿಸುವುದಾಗಿ ರೆಹಮಾನ್ ಶೇಖ್ ತಿಳಿಸಿದ್ದಾರೆ. ಲಾಟರಿ ಟಿಕೆಟ್ ಕಳ್ಳತನವಾಗಬಹುದು ಎಂಬ ಆತಂಕದಿಂದ ರೆಹಮಾನ್ ತನಗೆ ಕೆಲಸ ನೀಡಿದ ಬಿಲ್ಡರ್ ನೊಂದಿಗೆ ಚೆವಾಯೂರ್ ಪೊಲೀಸ್ ಠಾಣೆಗೆ ಬಂದಿದ್ದಾರೆ ಎಂದು ಎಸ್ ಐ ಎವಿ ಜಾನ್ ತಿಳಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆಯನ್ನು ತೆರೆದಿರುವ ರೆಹಮಾನ್ ಟಿಕೆಟ್ ಜಮಾ ಮಾಡಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT