ಸಾಂದರ್ಭಿಕ ಚಿತ್ರ 
ದೇಶ

ಮೃತದೇಹವನ್ನು ನದಿಗೆ ಎಸೆದ ಬೇಜಾಬ್ದಾರಿಯುತ ಪೊಲೀಸರು

ಅನಾಮಧೇಯ ಮೃತದೇಹ ಯಾವ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ ಎಂಬ ಗೊಂದಲಕ್ಕೆ ಸಿಲುಕಿದ್ದ ಪೊಲೀಸರು ವಿಚಾರಣೆ ನಡೆಯುವ ಬದಲು ಗೊಂದಲ ನಿವಾರಣೆಗೆ ಮೃತದೇಹವನ್ನೇ ನದಿಗೆ ಎಸೆದಿರುವ ಘಟನೆಯೊಂದು ಲಖನೌನಲ್ಲಿ ನಡೆದಿರುವುದಾಗಿ ವರದಿಯಾಗಿದೆ...

ಲಖನೌ: ಅನಾಮಧೇಯ ಮೃತದೇಹ ಯಾವ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ ಎಂಬ ಗೊಂದಲಕ್ಕೆ ಸಿಲುಕಿದ್ದ ಪೊಲೀಸರು ವಿಚಾರಣೆ ನಡೆಯುವ ಬದಲು ಗೊಂದಲ ನಿವಾರಣೆಗೆ ಮೃತದೇಹವನ್ನೇ ನದಿಗೆ ಎಸೆದಿರುವ ಘಟನೆಯೊಂದು ಲಖನೌನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕಳೆದ ಭಾನುವಾರ ರಾತ್ರಿ ಲಖನೌವಿನ ಹಜ್ರತ್ಘಂಜ್ ಹಾಗೂ ಮಹಾನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶದ ಮಧ್ಯೆ ಅನಾಮಧೇಯ ಮೃತದೇಹವೊಂದು ಪತ್ತೆಯಾಗಿತ್ತು. ಮೃತ ದೇಹವನ್ನು ಕಂಡ ಪೊಲೀಸರು ಪ್ರಕರಣ ಯಾವ ಠಾಣೆ ವ್ಯಾಪ್ತಿಗೆ ಬರುತ್ತದೆ ಎಂದು ಗೊಂದಲಕ್ಕೆ ಸಿಲುಕಿಕೊಂಡರು.

ಇದರಿಂದಾಗಿ ತಲೆಕೆಡಿಸಿಕೊಳ್ಳುವುದು ಯಾಕೆ ಎಂಬ ಕಾರಣಕ್ಕೋ ಏನೋ, ತನಿಖೆ ನಡೆಸುವ ಬದಲು ಗೊಂದಲ, ಗೋಜಲುಗಳೇ ಬೇಡವೆಂದು ಎರಡೂ ಠಾಣೆಯ ಪೊಲೀಸರು ಅಲ್ಲಿನ ಮೀನುಗಾರರಿಗೆ ಮೃತದೇಹವನ್ನು ಗೋಮತಿ ನದಿತೀರಕ್ಕೆ ಎಸೆಯುವಂತೆ ತಿಳಿಸಿದ್ದಾರೆ. ಇದರಂತೆ ಮೀನುಗಾರರು ಮೃತದೇಹವನ್ನು ನದಿ ತೀರಕ್ಕೆ ಎಸೆಯುತ್ತಿರುವ ಫೋಟೋಗಳೀಗ ವಿವಾದಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT