ಸಾಂದರ್ಭಿಕ ಚಿತ್ರ 
ದೇಶ

ಮೃತದೇಹವನ್ನು ನದಿಗೆ ಎಸೆದ ಬೇಜಾಬ್ದಾರಿಯುತ ಪೊಲೀಸರು

ಅನಾಮಧೇಯ ಮೃತದೇಹ ಯಾವ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ ಎಂಬ ಗೊಂದಲಕ್ಕೆ ಸಿಲುಕಿದ್ದ ಪೊಲೀಸರು ವಿಚಾರಣೆ ನಡೆಯುವ ಬದಲು ಗೊಂದಲ ನಿವಾರಣೆಗೆ ಮೃತದೇಹವನ್ನೇ ನದಿಗೆ ಎಸೆದಿರುವ ಘಟನೆಯೊಂದು ಲಖನೌನಲ್ಲಿ ನಡೆದಿರುವುದಾಗಿ ವರದಿಯಾಗಿದೆ...

ಲಖನೌ: ಅನಾಮಧೇಯ ಮೃತದೇಹ ಯಾವ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ ಎಂಬ ಗೊಂದಲಕ್ಕೆ ಸಿಲುಕಿದ್ದ ಪೊಲೀಸರು ವಿಚಾರಣೆ ನಡೆಯುವ ಬದಲು ಗೊಂದಲ ನಿವಾರಣೆಗೆ ಮೃತದೇಹವನ್ನೇ ನದಿಗೆ ಎಸೆದಿರುವ ಘಟನೆಯೊಂದು ಲಖನೌನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕಳೆದ ಭಾನುವಾರ ರಾತ್ರಿ ಲಖನೌವಿನ ಹಜ್ರತ್ಘಂಜ್ ಹಾಗೂ ಮಹಾನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶದ ಮಧ್ಯೆ ಅನಾಮಧೇಯ ಮೃತದೇಹವೊಂದು ಪತ್ತೆಯಾಗಿತ್ತು. ಮೃತ ದೇಹವನ್ನು ಕಂಡ ಪೊಲೀಸರು ಪ್ರಕರಣ ಯಾವ ಠಾಣೆ ವ್ಯಾಪ್ತಿಗೆ ಬರುತ್ತದೆ ಎಂದು ಗೊಂದಲಕ್ಕೆ ಸಿಲುಕಿಕೊಂಡರು.

ಇದರಿಂದಾಗಿ ತಲೆಕೆಡಿಸಿಕೊಳ್ಳುವುದು ಯಾಕೆ ಎಂಬ ಕಾರಣಕ್ಕೋ ಏನೋ, ತನಿಖೆ ನಡೆಸುವ ಬದಲು ಗೊಂದಲ, ಗೋಜಲುಗಳೇ ಬೇಡವೆಂದು ಎರಡೂ ಠಾಣೆಯ ಪೊಲೀಸರು ಅಲ್ಲಿನ ಮೀನುಗಾರರಿಗೆ ಮೃತದೇಹವನ್ನು ಗೋಮತಿ ನದಿತೀರಕ್ಕೆ ಎಸೆಯುವಂತೆ ತಿಳಿಸಿದ್ದಾರೆ. ಇದರಂತೆ ಮೀನುಗಾರರು ಮೃತದೇಹವನ್ನು ನದಿ ತೀರಕ್ಕೆ ಎಸೆಯುತ್ತಿರುವ ಫೋಟೋಗಳೀಗ ವಿವಾದಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT