ಜಾಟ್ ಪ್ರತಿಭಟನೆಯಿಂದ ರೈಲ್ವೆ ಇಲಾಖೆಗೆ 55 .92 ಕೋಟಿ ನಷ್ಟ: ಸುರೇಶ್ ಪ್ರಭು 
ದೇಶ

ಜಾಟ್ ಪ್ರತಿಭಟನೆಯಿಂದ ರೈಲ್ವೆ ಇಲಾಖೆಗೆ 55 .92 ಕೋಟಿ ನಷ್ಟ: ಸುರೇಶ್ ಪ್ರಭು

ಹರ್ಯಾಣದಲ್ಲಿ ನಡೆದ ಜಾಟ್ ಸಮುದಾಯದ ಪ್ರತಿಭಟನೆಯ ಪರಿಣಾಮ ರೈಲ್ವೆ ಇಲಾಖೆಗೆ 55.92 ಕೋಟಿ ನಷ್ಟ ಉಂಟಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.

ನವದೆಹಲಿ: ಹರ್ಯಾಣದಲ್ಲಿ ನಡೆದ ಜಾಟ್ ಸಮುದಾಯದ ಪ್ರತಿಭಟನೆಯ ಪರಿಣಾಮ ರೈಲ್ವೆ ಇಲಾಖೆಗೆ 55.92 ಕೋಟಿ ನಷ್ಟ ಉಂಟಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಹರ್ಯಾಣ ಮಾರ್ಗವಾಗಿ ಸಂಚರಿಸುವ ಒಟ್ಟು 2 ,314 ರೈಲುಗಳನ್ನು ರದ್ದುಗೊಳಿಸಬೇಕಾಯಿತು. ಇದರೊಂದಿಗೆ ಆಸ್ತಿ ಹಾನಿ ಸೇರಿದಂತೆ ಒಟ್ಟು ರೈಲ್ವೆ ಇಲಾಖೆಗೆ 55 .92 ಕೋಟಿ ನಷ್ಟ ಉಂಟಾಗಿದೆ ಎಂದು ಸುರೇಶ್ ಪ್ರಭು ಲೋಕಸಭೆಯಲ್ಲಿ ಹೇಳಿದ್ದಾರೆ.
ಫೆ.12 -24 ವರೆಗೆ ನಡೆದ ಪ್ರತಿಭಟನೆಗಳಿಂಡ ಒಟ್ಟು 2 ,134  ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಯಿತು. ಈ ಪೈಕಿ 430 ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದರೆ 259 ಎಕ್ಸ್ ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು ಎಂದು ಸುರೇಶ್ ಪ್ರಭು ಮಾಹಿತಿ ನೀಡಿದ್ದಾರೆ. ರೈಲ್ವೆ ಇಲಾಖೆ ಆಸ್ತಿಗೆ ಹಾನಿ ಉಂಟು ಮಾಡುವವರಿಗೆ ದಂಡ ವಿಧಿಸುವ ವ್ಯವಸ್ಥೆ ರೈಲ್ವೆ ಇಲಾಖೆಯಲ್ಲಿ ಇಲ್ಲ ಎಂದು ರೈಲ್ವೆ ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT