ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ಕಳ್ಳಭಟ್ಟಿ ತಯಾರಿಸಿದರೆ ಗಲ್ಲು ಶಿಕ್ಷೆ!

ಮದ್ಯಮಾರಾಟ ನಿಷೇಧಿಸಿ ಈಗಾಗಲೇ ಕಾನೂನು ರೂಪಿಸಿರುವ ಬಿಹಾರ ಸರ್ಕಾರ, ಇದೀಗ ಕಳ್ಳಭಟ್ಟಿ ತಯಾರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಇನ್ನು ಮುಂದೆ ಕಳ್ಳಭಟ್ಟಿ...

ಪಾಟ್ನ: ಮದ್ಯಮಾರಾಟ ನಿಷೇಧಿಸಿ ಈಗಾಗಲೇ ಕಾನೂನು ರೂಪಿಸಿರುವ ಬಿಹಾರ ಸರ್ಕಾರ, ಇದೀಗ ಕಳ್ಳಭಟ್ಟಿ ತಯಾರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಇನ್ನು ಮುಂದೆ ಕಳ್ಳಭಟ್ಟಿ ತಯಾರಿಸುವವರಿಗೆ ಗಲ್ಲು ಶಿಕ್ಷೆ ವಿಧಿಸುವುದಾಗಿ ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ 2016ರ ಏಪ್ರಿಲ್ 1 ರಿಂದ ಬಿಹಾರದಲ್ಲಿ ದೇಶಿಯ ಮದ್ಯಮಾರಾಟ ನಿಷೇಧ ಕಾನೂನು ಜಾರಿ ಮಾಡಿ ಕೆಲ ಸಮಯದ ಹಿಂದೆ ಜೆಡಿಯು ಸರ್ಕಾರ ಆದೇಶ ಹೊರಡಿಸಿತ್ತು.

ಈ ಕಾನೂನು ಜಾರಿಯಾದ ಬಳಿಕ ಕಳ್ಳಭಟ್ಟಿ ತಯಾರಿಕೆಯಲ್ಲಿ ಭಾಗಿಯಾಗಿದ್ದವರಿಗೆ ಗಲ್ಲು ಶಿಕ್ಷೆ ನೀಡಬಹುದಾದಂಥ ಕಾನೂನು ಕೂಡ ಜಾರಿಯಾಗಲಿದೆ. ಈ ಕುರಿತ ಮಸೂದೆಯನ್ನು ಪ್ರಸಕ್ತ ನಡೆಯುತ್ತಿರುವ ಬಜೆಟ್ ಅಧಿವೇಶನದ ವೇಳೆಯೇ ಆಂಗೀಕರಿಸಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಕಟಿಸಿದ್ದಾರೆ.

ಏ.1ರಿಂದ ದೇಶೀಯ ಮದ್ಯಗಳ ಮಾರಾಟಕ್ಕೆ ಪೂರ್ಣ ನಿಷೇಧವಿರಲಿದೆ. ಆದರೆ, ದೇಶೀಯವಾಗಿ ಉತ್ಪಾದಿಸಿದ ವಿದೇಶಿ ಮದ್ಯಗಳನ್ನು ಆಯ್ದ ಮಳಿಗೆಗಳಲ್ಲಿ ಮಾತ್ರವೇ ಮಾರಾಟ ಮಾಡಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT