ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ಕಳ್ಳಭಟ್ಟಿ ತಯಾರಿಸಿದರೆ ಗಲ್ಲು ಶಿಕ್ಷೆ!

ಮದ್ಯಮಾರಾಟ ನಿಷೇಧಿಸಿ ಈಗಾಗಲೇ ಕಾನೂನು ರೂಪಿಸಿರುವ ಬಿಹಾರ ಸರ್ಕಾರ, ಇದೀಗ ಕಳ್ಳಭಟ್ಟಿ ತಯಾರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಇನ್ನು ಮುಂದೆ ಕಳ್ಳಭಟ್ಟಿ...

ಪಾಟ್ನ: ಮದ್ಯಮಾರಾಟ ನಿಷೇಧಿಸಿ ಈಗಾಗಲೇ ಕಾನೂನು ರೂಪಿಸಿರುವ ಬಿಹಾರ ಸರ್ಕಾರ, ಇದೀಗ ಕಳ್ಳಭಟ್ಟಿ ತಯಾರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಇನ್ನು ಮುಂದೆ ಕಳ್ಳಭಟ್ಟಿ ತಯಾರಿಸುವವರಿಗೆ ಗಲ್ಲು ಶಿಕ್ಷೆ ವಿಧಿಸುವುದಾಗಿ ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ 2016ರ ಏಪ್ರಿಲ್ 1 ರಿಂದ ಬಿಹಾರದಲ್ಲಿ ದೇಶಿಯ ಮದ್ಯಮಾರಾಟ ನಿಷೇಧ ಕಾನೂನು ಜಾರಿ ಮಾಡಿ ಕೆಲ ಸಮಯದ ಹಿಂದೆ ಜೆಡಿಯು ಸರ್ಕಾರ ಆದೇಶ ಹೊರಡಿಸಿತ್ತು.

ಈ ಕಾನೂನು ಜಾರಿಯಾದ ಬಳಿಕ ಕಳ್ಳಭಟ್ಟಿ ತಯಾರಿಕೆಯಲ್ಲಿ ಭಾಗಿಯಾಗಿದ್ದವರಿಗೆ ಗಲ್ಲು ಶಿಕ್ಷೆ ನೀಡಬಹುದಾದಂಥ ಕಾನೂನು ಕೂಡ ಜಾರಿಯಾಗಲಿದೆ. ಈ ಕುರಿತ ಮಸೂದೆಯನ್ನು ಪ್ರಸಕ್ತ ನಡೆಯುತ್ತಿರುವ ಬಜೆಟ್ ಅಧಿವೇಶನದ ವೇಳೆಯೇ ಆಂಗೀಕರಿಸಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಕಟಿಸಿದ್ದಾರೆ.

ಏ.1ರಿಂದ ದೇಶೀಯ ಮದ್ಯಗಳ ಮಾರಾಟಕ್ಕೆ ಪೂರ್ಣ ನಿಷೇಧವಿರಲಿದೆ. ಆದರೆ, ದೇಶೀಯವಾಗಿ ಉತ್ಪಾದಿಸಿದ ವಿದೇಶಿ ಮದ್ಯಗಳನ್ನು ಆಯ್ದ ಮಳಿಗೆಗಳಲ್ಲಿ ಮಾತ್ರವೇ ಮಾರಾಟ ಮಾಡಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT