ಸಾಂದರ್ಭಿಕ ಚಿತ್ರ 
ದೇಶ

ಪಠಾಣ್ ಕೋಟ್ ಅರೆಸೇನಾಪಡೆ ವೆಚ್ಚವನ್ನು ನಮ್ಮ ಸಂಸದರ ನಿಧಿಯಿಂದ ತುಂಬಿ: ಆಪ್ ಸಂಸದರಿಂದ ಗೃಹ ಸಚಿವರಿಗೆ ಪತ್ರ

ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರಗಾಮಿಗಳ ದಾಳಿ ನಂತರ ಪಂಜಾಬ್ ನಲ್ಲಿ ಅರೆಸೇನಾ ಪಡೆ ನಿಯೋಜನೆಗೆ ಕೇಂದ್ರ...

ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರಗಾಮಿಗಳ ದಾಳಿ ನಂತರ ಪಂಜಾಬ್ ನಲ್ಲಿ ಅರೆಸೇನಾ ಪಡೆ ನಿಯೋಜನೆಗೆ ಕೇಂದ್ರ ಸರ್ಕಾರ ಪಂಜಾಬ್ ಸರ್ಕಾರದ ಬಳಿ 6 ಕೋಟಿ 35 ಲಕ್ಷ ರೂಪಾಯಿ ಕೇಳಿದೆ ಎಂಬ ವರದಿಗಳ ಮಧ್ಯೆ, ಈ ಮೊತ್ತವನ್ನು ತಮ್ಮ ಸಂಸದರ ನಿಧಿಯಿಂದ ಕಡಿತಗೊಳಿಸುವಂತೆ ಆಪ್ ಪಕ್ಷದ ಸಂಸದರಾದ ಭಗವಂತ್ ಮನ್ ಮತ್ತು ಸಾಧು ಸಿಂಗ್ ಕೋರಿದ್ದಾರೆ.

ಈ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಅವರು, ಪಂಜಾಬ್ ಸರ್ಕಾರ ಈಗಾಗಲೇ 1.5 ಲಕ್ಷ ಕೋಟಿ ಸಾಲದ ಹೊರೆಯಲ್ಲಿದೆ. ಹಾಗಾಗಿ ಧನ ಸಹಾಯ ಮಾಡಬೇಕು. ದೇಶದ ಸ್ವಾತಂತ್ರ್ಯದಲ್ಲಿ ಪಂಜಾಬ್ ರಾಜ್ಯದ ಕೊಡುಗೆ ಸಾಕಷ್ಟಿದೆ. ಆದರೂ ಕೂಡ ಈ ವರ್ಷ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಂಜಾಬ್ ರಾಜ್ಯದ ಸೇನಾ ಯೋಧರಿಗೆ ಅವಕಾಶ ನೀಡಲೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

''ನೀವು ಪಂಜಾಬ್ ನ್ನು ಭಾರತದ ಒಂದು ಭಾಗ ಎಂದು ಪರಿಗಣಿಸದಿದ್ದರೆ ಅಥವಾ ಪಠಾಣ್ ಕೋಟ್ ದಾಳಿಯನ್ನು ದೇಶದ ಮೇಲೆ ಉಗ್ರರು ನಡೆಸಿದ ದಾಳಿ ಎಂದು ಭಾವಿಸದಿದ್ದರೆ, ಆ ರಾಜ್ಯದ ಸಂಸದರಾದ ನಾವು ಸಂಸದರ ನಿಧಿಯಿಂದ ಮೊತ್ತವನ್ನು ಕಡಿತಗೊಳಿಸಿ ಎಂದು ಕೇಳುತ್ತೇವೆ ಎಂದಿದ್ದಾರೆ.

ಪಂಜಾಬ್ ಸರ್ಕಾರ ಆರೂವರೆ ಕೋಟಿ ರೂಪಾಯಿಯನ್ನು ನೀಡಲು ನಿರಾಕರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಉತ್ತರಿಸಿರುವ ಪಂಜಾಬ್ ಸರ್ಕಾರ, ಅರೆಸೇನಾ ಪಡೆ ನಿಯೋಜಿಸುವುದು ದೇಶದ ಹಿತಾಸಕ್ತಿಯಿಂದ. ಅದರ ಖರ್ಚುವೆಚ್ಚವನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸಬಾರದು ಎಂದು ಹೇಳಿದೆ.

ಎನ್ ಡಿಎ ಸರ್ಕಾರದ ಮೈತ್ರಿ ಪಕ್ಷಗಳಾದ ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿ ಪಂಜಾಬ್ ನಲ್ಲಿ ಅಧಿಕಾರದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT