ನಿವೇದಿತಾ ಮೆನನ್ 
ದೇಶ

ಭಾರತ ಕಾಶ್ಮೀರವನ್ನು ಕಾನೂನು ಬಾಹಿರವಾಗಿ ಆಕ್ರಮಿಸಿಕೊಂಡಿದೆ: ಜೆಎನ್‌ಯು ಪ್ರೊಫೆಸರ್

ಭಾರತ ಸರಕಾರವು ಕಾನೂನು ಬಾಹಿರವಾಗಿ ಕಾಶ್ಮೀರವನ್ನು ಆಕ್ರಮಿಸಿಕೊಂಡಿದೆ. ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಲ್ಲ,...

ನವದೆಹಲಿ: ಭಾರತ ಸರಕಾರವು ಕಾನೂನು ಬಾಹಿರವಾಗಿ ಕಾಶ್ಮೀರವನ್ನು ಆಕ್ರಮಿಸಿಕೊಂಡಿದೆ. ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಲ್ಲ, ಎಂದು ಜೆಎನ್‌ಯು ಪ್ರೊಫೆಸರ್ ನಿವೇದಿತಾ ಮೆನನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 22ರಂದು ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರೀತಿ ಮಾತನಾಡಿರುವ ವಿಡಿಯೊ ಫೆ.27ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಆಗಿದೆ.

ದೇಶದ್ರೋಹ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಜೈಲು ಸೇರಿ ಬಿಡುಗಡೆಗೊಂಡ ಪ್ರಕರಣ ಇನ್ನೂ ಹಸಿರಾಗಿರುವ ಹೊತ್ತಿನಲ್ಲೇ ಮೆನನ್ ಅವರಿಂದ ವಿವಾದಿತ ಹೇಳಿಕೆ ಹೊರಬಿದ್ದಿದೆ.

''ಕಾಶ್ಮೀರವನ್ನು ಭಾರತವು ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿದ್ದು, ಅದನ್ನು ಪ್ರತಿಯೊಬ್ಬರೂ ಒಪ್ಪಿಕೊಂಡಿದ್ದಾರೆ. 'ಟೈಮ್' ಮತ್ತು 'ನ್ಯೂಸ್‌ವೀಕ್'ನಂತಹ ಅಂತಾರಾಷ್ಟ್ರೀಯ ನಿಯತಕಾಲಿಕೆಗಳು ಕಾಶ್ಮೀರದ ನಕ್ಷೆಯನ್ನು ಭಿನ್ನ ರೂಪದಲ್ಲಿ ಪ್ರಕಟಿಸಿವೆ. ಈ ನಿಯತಕಾಲಿಕೆಗಳ ಪ್ರತಿಗಳನ್ನು ಸೆನ್ಸಾರ್ ಮಾಡಲಾಗಿದ್ದು, ಕೆಲವನ್ನು ನಾಶಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇಡೀ ವಿಶ್ವವೇ ಭಾರತವು ಕಾಶ್ಮೀರವನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಮಾತನಾಡಿಕೊಳ್ಳುತ್ತಿರುವಾಗ, ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಅಲ್ಲಿನ ಜನಗಳ ಭಾವನೆಗಳನ್ನು ಗೌರವಿಸಬೇಕು,'' ಎಂದು ವಿಡಿಯೊದಲ್ಲಿ ಹೇಳುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಇನ್ನು ನಿವೇದಿತಾ ಮೆನನ್ ಹೇಳಿಕೆಯನ್ನು ಬಿಜೆಪಿ ಯುವ ಮೋರ್ಚಾ ಹಾಗೂ ಎಬಿವಿಪಿ ಸಂಘಟನೆ ಖಂಡಿಸಿದ್ದು, ನಿವೇದಿತಾ ದೇಶದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT