ಬಾಬ್ರಿ ಮಸೀದಿ, ಒಳಚಿತ್ರದಲ್ಲಿ ಎಲ್.ಕೆ.ಅಡ್ವಾಣಿ(ಸಂಗ್ರಹ ಚಿತ್ರ) 
ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ವಿರುದ್ಧ ಅಪರಾಧ ಪಿತೂರಿ ಆರೋಪಗಳಿಂದ...

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ವಿರುದ್ಧ ಅಪರಾಧ ಪಿತೂರಿ ಆರೋಪಗಳಿಂದ ಮುಕ್ತಗೊಳಿಸಿ ಅಲಹಾಬಾದ್ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ ದಾಖಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.

ಇಲ್ಲಿ ಎರಡು ಕೇಸುಗಳ ವಿಚಾರಣೆ ನಡೆಯಲಿದೆ, ಒಂದು ಅಡ್ವಾಣಿಯವರ ವಿರುದ್ಧ ಹಾಗೂ ಇನ್ನೊಂದು 1992, ಡಿಸೆಂಬರ್ 6ರಂದು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ವೇಳೆ ರಾಮ ಕಥಾ ಕುಂಜ ವೇದಿಕೆಯಲ್ಲಿದ್ದ ಕರಸೇವಕರ ವಿರುದ್ಧ ದಾಖಲಿಸಿದ ಕೇಸಿನ ವಿಚಾರಣೆ.
 
ಭಾರತೀಯ ದಂಡಸಂಹಿತೆಯ ಸೆಕ್ಷನ್ 153ಎ(ವರ್ಗಗಳ ನಡುವೆ ದ್ವೇಷ ಬಿತ್ತುವಿಕೆ), ಸೆಕ್ಷನ್ 153ಬಿ(ರಾಷ್ಟ್ರೀಯ ಸಮಗ್ರತೆಗೆ ಧಕ್ಕೆಯುಂಟುಮಾಡಿದ್ದು) ಮತ್ತು ಸೆಕ್ಷನ್ 505ರ(ತಪ್ಪು ಹೇಳಿಕೆಗಳನ್ನು, ವದಂತಿಗಳನ್ನು ಹಬ್ಬಿಸಿ ದಂಗೆಯನ್ನುಂಟುಮಾಡುವುದು ಅಥವಾ ಸಾರ್ವಜನಿಕ ಶಾಂತಿ ವಿಚಲಿತಗೊಳಿಸುವುದು) ಅಡಿಯಲ್ಲಿ ಅಡ್ವಾಣಿ ಮತ್ತು ಇತರ 20 ಮಂದಿ ವಿರುದ್ಧ ಕೇಸು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT