ರಾಜನಾಥ್ ಸಿಂಗ್ 
ದೇಶ

ಇಶ್ರತ್ ಪ್ರಕರಣದಲ್ಲಿ ಮೋದಿಗೆ ಕಳಂಕ ತರಲು ಯುಪಿಎದಿಂದ 'ಪಿತೂರಿ': ರಾಜನಾಥ್ ಸಿಂಗ್

ಇಶ್ರತ್ ಜಾಹನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ...

ನವದೆಹಲಿ: ಇಶ್ರತ್ ಜಾಹನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರಿಗೆ ಕಳಂಕ ತರಲು ಯುಪಿಎ ಸರ್ಕಾರ ಭಾರೀ ಪಿತೂರಿ ನಡೆಸಿತ್ತು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.
ನೇರವಾಗಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಹೆಸರು ಪ್ರಸ್ತಾಪಿಸದೆ, ಅಂದಿನ ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ ರಾಜನಾಥ್ ಸಿಂಗ್, ಕೇಸರಿ ಭಯೋತ್ಪಾದನೆ ಎಂದು ಹೇಳುವ ಮೂಲಕ ಭಯೋತ್ಪಾದನೆಗೆ ಬಣ್ಣ ಹಚ್ಚಿದರು ಎಂದರು.
ಅಫಿಡವಿಟ್ ತಿದ್ದಿದ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಇಶ್ರತ್ ಜಾಹನ್ ಪ್ರಕರಣದಲ್ಲಿ ಅಂದಿನ ಯುಪಿಎ ಸರ್ಕಾರ ರಾಜಕೀಯ ಮಾಡಿರುವುದು ದುರದೃಷ್ಟಕರ ಎಂದರು.
ಬಣ್ಣ, ಮತ ಹಾಗೂ ಧರ್ಮಗಳನ್ನು ಭಯೋತ್ಪಾದನೆಯೊಂದಿಗೆ ಸೇರಿಸಬಾರದು. ಭಯೋತ್ಪಾದನೆಗೆ ಯಾವುದೇ ಬಣ್ಣ ಇಲ್ಲ. ಆದರೆ ಜಾತ್ಯತೀತ ವಾದಿಗಳು ಭಯೋತ್ಪಾದನೆಗೆ ಬಣ್ಣ ಹಚ್ಚಿದರು. ನಿರ್ದಿಷ್ಟ ಜಾತ್ಯತೀತೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT