ಪ್ರಶಾಂತ್ ಕಿಶೋರ್ 
ದೇಶ

ಬಿಜೆಪಿಯೇ ಮೈನ್ ಟಾರ್ಗೆಟ್ : ಪ್ರಶಾಂತ್ ಕಿಶೋರ್

2017 ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯೇ ನಮಗೆ ಮೈನ್ ಟಾರ್ಗೆಟ್, ಆಡಳಿತಾರೂಢ ಸಮಾಜವಾದಿ ಪಕ್ಷ ಎರಡನೇಯ ಟಾರ್ಗೆಟ್ ಎಂದು ಕಾಂಗ್ರೆಸ್ ..

ಲಕ್ನೋ: 2017 ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯೇ ನಮಗೆ ಮೈನ್ ಟಾರ್ಗೆಟ್, ಆಡಳಿತಾರೂಢ ಸಮಾಜವಾದಿ ಪಕ್ಷ ಎರಡನೇಯ ಟಾರ್ಗೆಟ್ ಎಂದು ಕಾಂಗ್ರೆಸ್ ಮುಖಂಡ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ರಾಜಕೀಯ ಆಖಾಡದಲ್ಲಿ ಪ್ರಮುಖವಾಗಿ ಚರ್ಚಿತವಾಗುತ್ತಿರುವ ಹೆಸರು ಪ್ರಶಾಂತ್ ಕಿಶೋರ್, ಅವರದ್ದು.  ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಮಹಾ ಮೈತ್ರಿ ಕೂಟ ಜಯಗಳಿಸಲು ಕಾರಣವಾದ ಮಾಸ್ಟರ್ ಮೈಂಡ್ ಪ್ರಶಾಂತ್ ಕಿಶೋರ್. ಉತ್ತರ ಪ್ರದೇಶ ಮತ್ತು ಗುಜರಾತ್ ವಿಧಾನ ಸಭೆ ಚುನಾವಣೆಯಲ್ಲಿ ಸಹಾಯ ನೀಡುವಂತೆ ಪ್ರಶಾಂತ್ ಕಿಶೋರ್ ಅವರಿಗೆ ಕಾಂಗ್ರೆಸ್ ಮನವಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ಜೊತೆ ಲಕ್ನೋದಲ್ಲಿ ಸುದೀರ್ಘ ಚರ್ಚೆ ನಡೆಸಿದ ಪ್ರಶಾಂತ್ ಕಿಶೋರ್ ಬಿಜೆಪಿಯೇ ನಮಗೆ ಮೈನ್ ಟಾರ್ಗೆಟ್ ಎಂದು ಹೇಳಿದ್ದಾರೆ. ಚುನಾವಣೆಗಾಗಿ ಈಗಾಗಲೇ ರಣತಂತ್ರ ಎಣೆಯುತ್ತಿರುವ ಪ್ರಶಾಂತ್ ಕಿಶೋರ್ ಜಯಗಳಿಸುವ ವಿಶ್ವಾಸವಿದ್ದವರು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT