ಸಾಂದರ್ಭಿಕ ಚಿತ್ರ 
ದೇಶ

ವಿವಾದದ ನಡುವೆಯು ಜೆಎನ್ ಯುಗೆ ರಾಷ್ಟ್ರಪತಿಗಳ ಪ್ರಶಸ್ತಿ

ಅನೇಕ ವಿವಾದಗಳ ಸುಳಿಯಲ್ಲಿ ಸಿಲುಕಿರುವ ಜವಹಾರ್ ಲಾಲ್...

ನವದೆಹಲಿ: ಅನೇಕ ವಿವಾದಗಳ ಸುಳಿಯಲ್ಲಿ ಸಿಲುಕಿರುವ ಜವಹಾರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ರಾಷ್ಟ್ರಪತಿಗಳ ಪ್ರಶಸ್ತಿಗೆ ಪಾತ್ರವಾಗಿದೆ.
ಸಂಶೋಧನೆ ಮತ್ತು ಪರಿವರ್ತನೆಗಾಗಿ ರಾಷ್ಟ್ರಪತಿಗಳ ಪ್ರಶಸ್ತಿಗೆ ಜೆಎನ್ ಯು ಪಾತ್ರವಾಗಿದೆ. ವಿಶ್ವವಿದ್ಯಾಲಯದ ಅಣ್ವಿಕ ಪರಾವಲಂಬಿ ಜೀವಿ ವಿಜ್ಞಾನ ವಿಭಾಗದ ಪ್ರೊ.ರಾಕೇಶ್ ಭಟ್ನಾಗರ್ ಅವರಿಗೆ ಈ ಪ್ರಶಸ್ತಿ ಲಭಿಸಿದೆ. 
ಮಾರ್ಚ್ 14ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಣಬ್ ಮುಖರ್ಜಿ ಅವರು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 
ಅಸ್ಸಾಂನಲ್ಲಿರುವ ತೇಜ್ ಪುರ್ ವಿಶ್ವವಿದ್ಯಾಲಯವು ಸಂದರ್ಶಕರ ಪ್ರಶಸ್ತಿಗೆ ಪಾತ್ರವಾಗಿದೆ ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. 
ಈ ಪ್ರಶಸ್ತಿ ನೀಡಲು ಎಲ್ಲಾ ವಿಶ್ವವಿದ್ಯಾಲಯಗಳಿಂದ ಅರ್ಜಿ ಆಹ್ವಾನಿಸಿತ್ತು. ಎಲ್ಲಾ ವಿಭಾಗಗಳು ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿದ್ದವು. ಒಮಿಟಾ ಪೌಲ್ ಅವರನ್ನೊಳಗೊಂಡ ಆಯ್ಕೆ ಸಮಿತಿ ರಚಿಸಲಾಗಿತ್ತು. ಈ ಸಮಿತಿಯಲ್ಲಿ ರಾಷ್ಟ್ರಪತಿ ಕಾರ್ಯದರ್ಶಿ, ಉನ್ನತ ಮಟ್ಟದ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ವಿಜ್ಞಾನ ಮತ್ತು ತಾಂತ್ರಿಕ ವಿಭಾಗದ ಅಧ್ಯಕ್ಷ, ಸೈನ್ ಟಿವಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನ ನಿರ್ದೇಶಕರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಡಿಗೆದಾರರಿಗೆ ಸಿಹಿ ಸುದ್ದಿ: ಕರ್ನಾಟಕ 'ಬಾಡಿಗೆ ತಿದ್ದುಪಡಿ ವಿಧೇಯಕ' 2025 ವಿಧಾನಸಭೆಯಲ್ಲಿ ಮಂಡನೆ!

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

25 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು..: ಅನಿರುದ್ಧಾಚಾರ್ಯ ವಿರುದ್ಧ ಕೇಸ್ ದಾಖಲು! 'ಪೂಕಿ ಬಾಬಾ' ಹೇಳಿದ್ದೇನು ಗೊತ್ತಾ?

SCROLL FOR NEXT