ಸಾಂದರ್ಭಿಕ ಚಿತ್ರ 
ದೇಶ

ವಿವಾದದ ನಡುವೆಯು ಜೆಎನ್ ಯುಗೆ ರಾಷ್ಟ್ರಪತಿಗಳ ಪ್ರಶಸ್ತಿ

ಅನೇಕ ವಿವಾದಗಳ ಸುಳಿಯಲ್ಲಿ ಸಿಲುಕಿರುವ ಜವಹಾರ್ ಲಾಲ್...

ನವದೆಹಲಿ: ಅನೇಕ ವಿವಾದಗಳ ಸುಳಿಯಲ್ಲಿ ಸಿಲುಕಿರುವ ಜವಹಾರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ರಾಷ್ಟ್ರಪತಿಗಳ ಪ್ರಶಸ್ತಿಗೆ ಪಾತ್ರವಾಗಿದೆ.
ಸಂಶೋಧನೆ ಮತ್ತು ಪರಿವರ್ತನೆಗಾಗಿ ರಾಷ್ಟ್ರಪತಿಗಳ ಪ್ರಶಸ್ತಿಗೆ ಜೆಎನ್ ಯು ಪಾತ್ರವಾಗಿದೆ. ವಿಶ್ವವಿದ್ಯಾಲಯದ ಅಣ್ವಿಕ ಪರಾವಲಂಬಿ ಜೀವಿ ವಿಜ್ಞಾನ ವಿಭಾಗದ ಪ್ರೊ.ರಾಕೇಶ್ ಭಟ್ನಾಗರ್ ಅವರಿಗೆ ಈ ಪ್ರಶಸ್ತಿ ಲಭಿಸಿದೆ. 
ಮಾರ್ಚ್ 14ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಣಬ್ ಮುಖರ್ಜಿ ಅವರು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 
ಅಸ್ಸಾಂನಲ್ಲಿರುವ ತೇಜ್ ಪುರ್ ವಿಶ್ವವಿದ್ಯಾಲಯವು ಸಂದರ್ಶಕರ ಪ್ರಶಸ್ತಿಗೆ ಪಾತ್ರವಾಗಿದೆ ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. 
ಈ ಪ್ರಶಸ್ತಿ ನೀಡಲು ಎಲ್ಲಾ ವಿಶ್ವವಿದ್ಯಾಲಯಗಳಿಂದ ಅರ್ಜಿ ಆಹ್ವಾನಿಸಿತ್ತು. ಎಲ್ಲಾ ವಿಭಾಗಗಳು ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿದ್ದವು. ಒಮಿಟಾ ಪೌಲ್ ಅವರನ್ನೊಳಗೊಂಡ ಆಯ್ಕೆ ಸಮಿತಿ ರಚಿಸಲಾಗಿತ್ತು. ಈ ಸಮಿತಿಯಲ್ಲಿ ರಾಷ್ಟ್ರಪತಿ ಕಾರ್ಯದರ್ಶಿ, ಉನ್ನತ ಮಟ್ಟದ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ವಿಜ್ಞಾನ ಮತ್ತು ತಾಂತ್ರಿಕ ವಿಭಾಗದ ಅಧ್ಯಕ್ಷ, ಸೈನ್ ಟಿವಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನ ನಿರ್ದೇಶಕರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT