ಅಮಿತಾಬ್ ಠಾಕೂರ್ 
ದೇಶ

ಸಿಎಂ ನಿವಾಸದ ಎದುರು ಐಪಿಎಸ್‌ ಅಧಿಕಾರಿ ಅಮಿತಾಬ್ ಧರಣಿ

ಸೇವೆಯಿಂದ ಅಮಾನತುಗೊಂಡಿರುವ ಐಪಿಎಸ್‌ ಅಧಿಕಾರಿ ಅಮಿತಾಬ್‌ ಠಾಕೂರ್‌ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರ ನಿವಾಸದ ಎದುರು ಧರಣಿ ಆರಂಭಿಸಿದ್ದಾರೆ...

ಲಖನೌ: ಸೇವೆಯಿಂದ ಅಮಾನತುಗೊಂಡಿರುವ ಐಪಿಎಸ್‌ ಅಧಿಕಾರಿ ಅಮಿತಾಬ್‌ ಠಾಕೂರ್‌ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರ ನಿವಾಸದ ಎದುರು ಧರಣಿ ಆರಂಭಿಸಿದ್ದಾರೆ.

ಅಮಾನತುಗೊಂಡಿರುವ ಅಧಿಕಾರಿಗಳ ಬಗ್ಗೆ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿರುವ ಅಮಿತಾಬ್ ಅಖಿಲೇಶ್ ಯಾದವ್ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದರು. ಈ ವೇಳೆ ಪೊಲೀಸರು ತಡೆದಿದ್ದರಿಂದ ರಸ್ತೆ ಮಧ್ಯದಲ್ಲೇ ಧರಣಿ ಆರಂಭಿಸಿದರು.

ಹಿರಿಯ ನಾಗರಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಖನೌ ಡಿಐಜಿ ಡಿ.ಕೆ. ಚೌಧರಿ ಅವರನ್ನು ಸೇವೆಯಿಂದ ಅಮಾನತು ಮಾಡಿದ 15 ದಿನಗಳಲ್ಲಿಯೇ ಮರುನೇಮಕ ಮಾಡಿಕೊಳ್ಳಲಾಗಿದೆ. ಆದರೆ, ತಮ್ಮ ಪ್ರಕರಣದಲ್ಲಿ ಸರ್ಕಾರ ಅದೇ ರೀತಿ ನಡೆದುಕೊಳ್ಳದೇ ತಾರತಮ್ಯ ಎಸಗುತ್ತಿದೆ ಎಂದು ಅಮಿತಾಬ್‌ ಠಾಕೂರ್‌ ಆರೋಪಿಸಿದ್ದಾರೆ.

ಅನ್ಯಾಯದ ವಿರುದ್ಧ ದನಿ ಎತ್ತಿದ್ದ ತಮ್ಮನ್ನು 2015ರ ಜುಲೈನಲ್ಲಿ ಅಮಾನತು ಮಾಡಲಾಗಿದ್ದು, ಇದುವರೆಗೂ ಮುಂದುವರಿಸಲಾಗಿದೆ. ಆದರೆ, ನಿಯಮದ ಪ್ರಕಾರ ಅಮಾನತು ಆದೇಶವನ್ನು 90 ದಿನಗಳ ಒಳಗಾಗಿ ನವೀಕರಣ ಮಾಡದಿದ್ದರೆ ಅದು ಅನೂರ್ಜಿತವಾಗುತ್ತದೆ ಎಂದು ಡಿಜಿಪಿ ಜಾವೀದ್‌ ಅಹಮದ್‌ ಅವರಿಗೆ ಈ ಮೇಲ್‌ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT