ಮೋಹನ್ ಭಾಗವತ್ 
ದೇಶ

ವಿವಿಗಳಲ್ಲಿ ನಡೆಯುವ 'ರಾಷ್ಟ್ರ ವಿರೋಧಿ' ಚಟುವಟಿಕೆಗಳನ್ನು ಪರಿಶೀಲಿಸಿ:ಕೇಂದ್ರಕ್ಕೆ ಆರ್ಎಸ್ಎಸ್

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ದೇಶ ವಿರೋಧಿ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿದ್ದ...

ನಾಗೌರ್(ರಾಜಸ್ಥಾನ): ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ದೇಶ ವಿರೋಧಿ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿದ್ದ ಬೆನ್ನಲ್ಲೇ, ವಿಶ್ವವಿದ್ಯಾಲಯಗಳಲ್ಲಿನ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಪರಿಶೀಸಿಲಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಕೇಳಿಕೊಂಡಿದೆ. ಅಲ್ಲದೆ ಜೆಎನ್ ಯುನಲ್ಲಿನ ದೇಶ ವಿರೋಧಿ ಘೋಷಣೆಗಳನ್ನು ಸಹಿಸಿಕೊಂಡಿದ್ದು ಹೇಗೆ ಎಂದು ಪ್ರಶ್ನಿಸಿದೆ.
ರಾಷ್ಟ್ರ ವಿರೋಧಿ ಮತ್ತು ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ವಿವಿಗಳು ರಾಜಕೀಯ ಕೇಂದ್ರವಾಗುವುದನ್ನು ತೆಡಯಬೇಕು ಎಂದು ಆರ್ ಎಸ್ ಎಸ್ ತನ್ನ ಮೂರು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಒತ್ತಾಯಿಸಿದೆ.
ಜೆಎನ್ ಯು ವಿವಾದ ಹಾಗೂ ಹೈದರಾಬಾದ್ ವಿವಿಯ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರ ಶಿಕ್ಷಣವನ್ನು ಕೇಶರಿಕರಣಗೊಳಿಸುತ್ತದೆ ಎಂಬ ಆರೋಪ ಎದುರಿಸುತ್ತಿರುವ ಸಂದರ್ಭದಲ್ಲೇ ನಡೆಯುತ್ತಿರುವ ಬಿಜೆಪಿಯ ಮಾತೃ ಸಂಘಟನೆ ಪ್ರತಿನಿಧಿ ಸಭೆ ಮಹತ್ವ ಪಡೆದುಕೊಂಡಿದೆ.
ಸಭೆಯ ಆರಂಭದ ದಿನವಾದ ಇಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT