ಹೇಮಾ ಉಪಾಧ್ಯಾಯ 
ದೇಶ

ಹೇಮಾ ಉಪಾಧ್ಯಾಯ ಕೊಲೆ ಪ್ರಕರಣ: ಪತಿ ಸೇರಿ ನಾಲ್ವರ ವಿರುದ್ಧ ಚಾರ್ಜ್ ಶೀಟ್

ಕಲಾವಿದೆ ಹೇಮಾ ಉಪಾಧ್ಯಾಯ ಮತ್ತು ಅವರ ವಕೀಲ ಹರೀಶ್‌ ಭಂಬಾನಿ ನಿಗೂಢ ಕೊಲೆ ಪ್ರಕರಣ ಸಂಬಂಧ ಚಾರ್ಜ್‌ಶೀಟ್ ದಾಖಲಿಸಿರುವ ಮುಂಬೈ ಪೊಲೀಸರು...

ಮುಂಬೈ:  ಕಲಾವಿದೆ ಹೇಮಾ ಉಪಾಧ್ಯಾಯ ಮತ್ತು ಅವರ ವಕೀಲ ಹರೀಶ್‌ ಭಂಬಾನಿ ನಿಗೂಢ ಕೊಲೆ ಪ್ರಕರಣ ಸಂಬಂಧ ಚಾರ್ಜ್‌ಶೀಟ್ ದಾಖಲಿಸಿರುವ ಮುಂಬೈ ಪೊಲೀಸರು, ಹೇಮಾ ಪತಿ ಚಿಂತನ್ ಉಪಾಧ್ಯಾಯ ಅವರನ್ನು ಪ್ರಮುಖ ಆರೋಪಿ ಎಂದು ಹೇಳಿದ್ದಾರೆ.

ಬೊರಿವಿಲಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೀಟ್‌ ಕೋರ್ಟ್‌ನಲ್ಲಿ ಸಲ್ಲಿಸಿರುವ ಎರಡು ಸಾವಿರ ಪುಟಗಳ ಬೃಹತ್ ಗಾತ್ರದ  ದೋಷಾರೋಪ ಪಟ್ಟಿಯಲ್ಲಿ ಚಿಂತನ್ ಹಾಗೂ ಇತರ ನಾಲ್ವರಾದ ವಿದ್ಯಾಧರ್ ರಾಜಭರ್, ಪ್ರದೀಪ್ ರಾಜಭರ್, ಶಿವಕುಮಾರ್ ರಾಜಭರ್ ಹಾಗೂ ವಿಜಯ್ ರಾಜಭರ್ ಅವರ ವಿರುದ್ಧ ಆರೋಪ ಹೊರಿಸಲಾಗಿದೆ.

ಪ್ರಕರಣದ ತನಿಖೆಯನ್ನು ಮುಗಿಸಿದ್ದೇವೆ. ದೋಷಾರೋಪ ಪಟ್ಟಿಯನ್ನು ಬೊರಿವಿಲಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ. ಪ್ರಕರಣ ಸೆಷೆನ್ಸ್ ಕೋರ್ಟ್‌ಗೆ ಬಂದಾಗ ದೋಷಾರೋಪ ನಿಗದಿಯಾಗಲಿದ್ದು, ವಿಚಾರಣೆ ಆರಂಭಗೊಳ್ಳಲಿದೆ  ಎಂದು ಹಿರಿಯ ಪೊಲೀಸ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಲ್ಲದೇ ಉಜ್ವಲ್ ನಿಕ್ಕಂ ಅವರನ್ನು ಪ್ರಕರಣದ ವಿಶೇಷ ಸರ್ಕಾರಿ ವಕೀಲರಾಗಿ ನೇಮಿಸುವಂತೆಯೂ ಪೊಲೀಸರು ಶಿಫಾರಸು ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ವಿದ್ಯಾಧರ್ ಅವರ ತಾಯಿ ಸೇರಿದಂತೆ 30 ಸಾಕ್ಷ್ಮಿಗಳನ್ನು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT