ಪ್ರಧಾನಿ ನರೇಂದ್ರ ಮೋದಿ ಯವರು ಮದ್ಯಪ್ರವೇಶಿಸಬೇಕೆಂದು ಒತ್ತಾಯಿಸುತ್ತಿರುವ ಕಿಂಗ್ ಫಿಶರ್ ಏರ್ ಲೈನ್ಸ್ ನೌಕರರು (ಕೃಪೆ: ಪಿಟಿಐ) 
ದೇಶ

ವಿಜಯ ಮಲ್ಯ ವಿವಾದ: ಮೋದಿ ಮಧ್ಯಪ್ರವೇಶಕ್ಕೆ ಒತ್ತಾಯ

ಮದ್ಯ ದೊರೆ ವಿಜಯ್ ಮಲ್ಯ ವಿವಾದಗಳಿಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕೆಂದು ಒತ್ತಾಯಿಸಿ ಸಾಲದ...

ನವದೆಹಲಿ: ಮದ್ಯ ದೊರೆ ವಿಜಯ್ ಮಲ್ಯ ವಿವಾದಗಳಿಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕೆಂದು ಒತ್ತಾಯಿಸಿ ಸಾಲದ ಕೂಪದಲ್ಲಿರುವ ಕಿಂಗ್‌ಫಿಶರ್ ಏರ್‌ಲೈನ್ಸ್‌ನ ಮಾಜಿ ಉದ್ಯೋಗಿಗಳು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ.
ಕಿಂಗ್‌ಫಿಶರ್ ಏರ್‌ಲೈನ್ಸ್ ಉದ್ಯೋಗಿಗಳ ಹಿತದೃಷ್ಟಿಯಿಂದ ಪ್ರಧಾನಿ ಈ ವಿಷಯಕ್ಕೆ ಮದ್ಯಪ್ರವೇಶಿಸಬೇಕೆಂದು ಇವರು ಒತ್ತಾಯಿಸಿದ್ದಾರೆ. ಇಲ್ಲಿಯವರೆಗೆ ನಮಗೆ ಸಂಬಳ ಸಿಕ್ಕಿಲ್ಲ. ಭವಿಷ್ಯ ನಿಧಿ ಮತ್ತು ಗ್ರಾಜ್ಯುವಿಟಿ ಹಣ ಇನ್ನೂ ಕೈಸೇರಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. 
ನಮ್ಮಲ್ಲಿರುವ ಪ್ರಸ್ತುತ ನಿಯಮದ ಪ್ರಕಾರ ಅದು ಉದ್ಯೋಗಿಗಳ ಹಿತವನ್ನು ಕಾಪಾಡಬೇಕಿತ್ತು. ಆದರೆ ನಮಗೆ ಕೆಲಸ ಮಾಡಿದ್ದಕ್ಕೆ ಸಂಬಳ ಸಿಕ್ಕಿಲ್ಲ. ಅಷ್ಟೇ ಅಲ್ಲ ಇದರ ವಿರುದ್ಧ ನ್ಯಾಯಾಂಗ ಹೋರಾಟ ಮಾಡಲು ಹೋದರೂ, ಶುಲ್ಕ ಪಾವತಿ ಮಾಡುವಷ್ಟೂ ದುಡ್ಡು ಈ ನೌಕರರ ಕೈಯಲ್ಲಿ ಇಲ್ಲ. ಇನ್ನೂ ಕೆಲವರು ತಮಗೆ ಸಿಗಬೇಕಾಗಿದ್ದ ಹಣಕ್ಕಾಗಿ ಹೋರಾಟ ನಡೆಸುತ್ತಲೇ ಇದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.
ಕಿಂಗ್ ಫಿಶರ್ ಏರ್‌ಲೈನ್ಸ್ ಸ್ಥಗಿತದಿಂದಾಗಿ ಸರಿಸುಮಾರು 7,000 ನೌಕರರಿಗೆ ಸಮಸ್ಯೆಯಾಗಿದೆ. ಹೀಗೆ ಕೆಲಸ ಕಳೆದುಕೊಂಡ ನೌಕರರಲ್ಲಿ ಹೆಚ್ಚಿನವರಿಗೆ ಕಾನೂನು ಹೋರಾಟ ಮಾಡಲು ಸಾಮರ್ಥ್ಯವಿಲ್ಲದವರಿಗಾಗಿದ್ದಾರೆ. ಆದ್ದರಿಂದ ನಮಗೆ ಬಾಕಿ ಬರಬೇಕಾಗಿರುವ ಸಂಬಳದ ವಿಷಯದಲ್ಲಿ ಮದ್ಯಪ್ರವೇಶಿಸಬೇಕೆಂದು ಕಿಂಗ್‌ಫಿಶರ್ ನೌಕರರ ಪರವಾಗಿ ನಾವು ವಿನಂತಿಸುತ್ತೇವೆ ಎಂದು ಮಾಜಿ ನೌಕರರು ಪ್ರಧಾನಿಯವರಲ್ಲಿ ವಿನಂತಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT