ಸಂಗ್ರಹ ಚಿತ್ರ 
ದೇಶ

ಬಿಹಾರದಲ್ಲಿ ದೋಣಿ ದುರಂತ: 5 ಮಕ್ಕಳ ಜಲಸಮಾಧಿ

ಬಿಹಾರದ ಬೆಗುಸರೈ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಐವರು ಮಕ್ಕಳು ಜಲಸಮಾಧಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ...

ಬೆಗುಸರೈ: ಬಿಹಾರದ ಬೆಗುಸರೈ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಐವರು ಮಕ್ಕಳು ಜಲಸಮಾಧಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಒಟ್ಟು 13 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಕುಮಾರ್ ಸಂಘ್ ಗ್ರಾಮದ ಬಳಿಯ ಸಿಗ್ರೈಲಾ ತೊರೆಯಲ್ಲಿ ಮುಳುಗಿದ್ದು, ಮೂವರು ಬಾಲಕು ಈಜಿ ದಡ ಸೇರಿ ಪ್ರಾಣಾಪಾಯದಿಂದ  ಪಾರಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿಗಳು ಕೂಡಲೇ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಐದು ಮೃತ  ದೇಹಗಳು ದೊರೆತಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ದೋಣಿಯಲ್ಲಿ ತೆರಳುತ್ತಿದ್ದವರೆಲ್ಲರೂ ಕುಮಾರ್ ಸಂಘ್ ಗ್ರಾಮದವರೆಂದು ತಿಳಿದುಬಂದಿದ್ದು, ಮೃತರನ್ನು ರೂಪಮ್ ಕುಮಾರಿ (8 ವರ್ಷ), ಅಭಿಷೇಕ್ ಕುಮಾರ್ (10 ವರ್ಷ), ಜಿತ್ನಿ ಕುಮಾರಿ (12  ವರ್ಷ), ಛೊಟ್ಕಿಕುಮಾರಿ (8 ವರ್ಷ) ಮತ್ತು ಸಚಿನ್ (10 ವರ್ಷ) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ ಸಾವು-ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ರಕ್ಷಣಾ ತಂಡದ  ಅಧಿಕಾರಿಗಳು ಹೇಳುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT