ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂಖಾನ್ 
ದೇಶ

ನಾನು ಸಾಧ್ವಿ ಪ್ರಾಚಿಯನ್ನು ಪ್ರೀತಿಸುತ್ತೇನೆ: ಅಜಂಖಾನ್

ನಾನು ಸಾಧ್ವಿ ಪ್ರಾಚಿಯ್ನು ಪ್ರೀತಿಸುತ್ತಿದ್ದೇನೆ. ಹಾಗೆಂದ ಮಾತ್ರಕ್ಕೆ ಇದು ಲವ್ ಜಿಹಾದ್ ಎಂದು ತಿಳಿಯಬೇಡಿ ಎಂದು ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂಖಾನ್...

ಆಗ್ರಾ: ನಾನು ಸಾಧ್ವಿ ಪ್ರಾಚಿಯ್ನು ಪ್ರೀತಿಸುತ್ತಿದ್ದೇನೆ. ಹಾಗೆಂದ ಮಾತ್ರಕ್ಕೆ ಇದು ಲವ್ ಜಿಹಾದ್ ಎಂದು ತಿಳಿಯಬೇಡಿ ಎಂದು ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂಖಾನ್ ಅವರು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಜಂಖಾನ್ ಅವರು, ನಾನು ಸಾಧ್ವಿ ಪ್ರಾಚಿಯನ್ನು ಪ್ರೀತಿಸುತ್ತೇನೆ. ಆದರೆ, ಸಾಧ್ವಿಯೇಕೆ ನನ್ನನ್ನು ದ್ವೇಷಿಸುತ್ತಾರೆ. ಈಗಲೂ ಹೇಳುತ್ತೇನೆ ನಾನು ಸಾಧ್ವಿಯನ್ನು ಪ್ರೀತಿಸುತ್ತೇನೆ. ಇದನ್ನು ಲವ್ ಜಿಹಾದ್ ಎಂದು ಹೇಳಬೇಡಿ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಪಕ್ಷದಲ್ಲಿರುವ ಅವಿವಾಹಿತ ನಾಯಕರ ಕುರಿತಂತೆ ಕಿಡಿಕಾರಿರುವ ಅವರು, ಬಿಜೆಪಿ ಮೊದಲು ಅವಿವಾಹಿತರಿಗೆ ಮದುವೆಯನ್ನು ಮಾಡಿಸಬೇಕು. ಬಿಜೆಪಿಯಲ್ಲಿರುವ ಎಲ್ಲಾ ಅವಿವಾಹಿತರು ವಿವಾಹಗಬೇಕೆಂದು  ನಾನು ಕೇಳಿಕೊಳ್ಳುತ್ತಿದ್ದೇನೆ ಎಂದು ಹೇಳಿದರು. ಅಲ್ಲದೆ, ಯಾರ ಹೆಸರನ್ನು ಹೇಳದೆ ಪರೋಕ್ಷವಾಗಿ ಮಾತನಾಡಿದ ಅವರು, ನಾಯಕರು ಅಸಂಬದ್ಧವಾಗಿ ಮಾತನಾಡುತ್ತಿದ್ದು, ಅವರ ಒತ್ತಡಗಳನ್ನು ಹೊರಹಾಕಲು ಮದುವೆಯಾಗಬೇಕಿದೆ ಎಂದು ಹೇಳಿದ್ದಾರೆ.

ಇದರಂತೆ ಅಜಂಖಾನ್ ಅವರ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರು, ಸಾಧ್ವಿ ಪ್ರಾಚಿಯನ್ನು ಪ್ರೀತಿ ಮಾಡುತ್ತಿದ್ದೇನೆಂದು ಹೇಳುತ್ತಿರುವ ಅಜಂಖಾನ್ ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅಜಂಖಾನ್ ಅವರು ಎಂತಹ ವ್ಯಕ್ತಿ. ಒಂದು ವೇಳೆ ಅವರ ತಾಯಿ ಹಾಗೂ ತಂಗಿಯರ ಬಗ್ಗೆಯೂ ಇದೇ ರೀತಿಯಾಗಿ ಆಲೋಚನೆ ಮಾಡಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT