ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂಖಾನ್ 
ದೇಶ

ನಾನು ಸಾಧ್ವಿ ಪ್ರಾಚಿಯನ್ನು ಪ್ರೀತಿಸುತ್ತೇನೆ: ಅಜಂಖಾನ್

ನಾನು ಸಾಧ್ವಿ ಪ್ರಾಚಿಯ್ನು ಪ್ರೀತಿಸುತ್ತಿದ್ದೇನೆ. ಹಾಗೆಂದ ಮಾತ್ರಕ್ಕೆ ಇದು ಲವ್ ಜಿಹಾದ್ ಎಂದು ತಿಳಿಯಬೇಡಿ ಎಂದು ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂಖಾನ್...

ಆಗ್ರಾ: ನಾನು ಸಾಧ್ವಿ ಪ್ರಾಚಿಯ್ನು ಪ್ರೀತಿಸುತ್ತಿದ್ದೇನೆ. ಹಾಗೆಂದ ಮಾತ್ರಕ್ಕೆ ಇದು ಲವ್ ಜಿಹಾದ್ ಎಂದು ತಿಳಿಯಬೇಡಿ ಎಂದು ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂಖಾನ್ ಅವರು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಜಂಖಾನ್ ಅವರು, ನಾನು ಸಾಧ್ವಿ ಪ್ರಾಚಿಯನ್ನು ಪ್ರೀತಿಸುತ್ತೇನೆ. ಆದರೆ, ಸಾಧ್ವಿಯೇಕೆ ನನ್ನನ್ನು ದ್ವೇಷಿಸುತ್ತಾರೆ. ಈಗಲೂ ಹೇಳುತ್ತೇನೆ ನಾನು ಸಾಧ್ವಿಯನ್ನು ಪ್ರೀತಿಸುತ್ತೇನೆ. ಇದನ್ನು ಲವ್ ಜಿಹಾದ್ ಎಂದು ಹೇಳಬೇಡಿ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಪಕ್ಷದಲ್ಲಿರುವ ಅವಿವಾಹಿತ ನಾಯಕರ ಕುರಿತಂತೆ ಕಿಡಿಕಾರಿರುವ ಅವರು, ಬಿಜೆಪಿ ಮೊದಲು ಅವಿವಾಹಿತರಿಗೆ ಮದುವೆಯನ್ನು ಮಾಡಿಸಬೇಕು. ಬಿಜೆಪಿಯಲ್ಲಿರುವ ಎಲ್ಲಾ ಅವಿವಾಹಿತರು ವಿವಾಹಗಬೇಕೆಂದು  ನಾನು ಕೇಳಿಕೊಳ್ಳುತ್ತಿದ್ದೇನೆ ಎಂದು ಹೇಳಿದರು. ಅಲ್ಲದೆ, ಯಾರ ಹೆಸರನ್ನು ಹೇಳದೆ ಪರೋಕ್ಷವಾಗಿ ಮಾತನಾಡಿದ ಅವರು, ನಾಯಕರು ಅಸಂಬದ್ಧವಾಗಿ ಮಾತನಾಡುತ್ತಿದ್ದು, ಅವರ ಒತ್ತಡಗಳನ್ನು ಹೊರಹಾಕಲು ಮದುವೆಯಾಗಬೇಕಿದೆ ಎಂದು ಹೇಳಿದ್ದಾರೆ.

ಇದರಂತೆ ಅಜಂಖಾನ್ ಅವರ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರು, ಸಾಧ್ವಿ ಪ್ರಾಚಿಯನ್ನು ಪ್ರೀತಿ ಮಾಡುತ್ತಿದ್ದೇನೆಂದು ಹೇಳುತ್ತಿರುವ ಅಜಂಖಾನ್ ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅಜಂಖಾನ್ ಅವರು ಎಂತಹ ವ್ಯಕ್ತಿ. ಒಂದು ವೇಳೆ ಅವರ ತಾಯಿ ಹಾಗೂ ತಂಗಿಯರ ಬಗ್ಗೆಯೂ ಇದೇ ರೀತಿಯಾಗಿ ಆಲೋಚನೆ ಮಾಡಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT