ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂಖಾನ್ 
ದೇಶ

ನಾನು ಸಾಧ್ವಿ ಪ್ರಾಚಿಯನ್ನು ಪ್ರೀತಿಸುತ್ತೇನೆ: ಅಜಂಖಾನ್

ನಾನು ಸಾಧ್ವಿ ಪ್ರಾಚಿಯ್ನು ಪ್ರೀತಿಸುತ್ತಿದ್ದೇನೆ. ಹಾಗೆಂದ ಮಾತ್ರಕ್ಕೆ ಇದು ಲವ್ ಜಿಹಾದ್ ಎಂದು ತಿಳಿಯಬೇಡಿ ಎಂದು ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂಖಾನ್...

ಆಗ್ರಾ: ನಾನು ಸಾಧ್ವಿ ಪ್ರಾಚಿಯ್ನು ಪ್ರೀತಿಸುತ್ತಿದ್ದೇನೆ. ಹಾಗೆಂದ ಮಾತ್ರಕ್ಕೆ ಇದು ಲವ್ ಜಿಹಾದ್ ಎಂದು ತಿಳಿಯಬೇಡಿ ಎಂದು ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂಖಾನ್ ಅವರು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಜಂಖಾನ್ ಅವರು, ನಾನು ಸಾಧ್ವಿ ಪ್ರಾಚಿಯನ್ನು ಪ್ರೀತಿಸುತ್ತೇನೆ. ಆದರೆ, ಸಾಧ್ವಿಯೇಕೆ ನನ್ನನ್ನು ದ್ವೇಷಿಸುತ್ತಾರೆ. ಈಗಲೂ ಹೇಳುತ್ತೇನೆ ನಾನು ಸಾಧ್ವಿಯನ್ನು ಪ್ರೀತಿಸುತ್ತೇನೆ. ಇದನ್ನು ಲವ್ ಜಿಹಾದ್ ಎಂದು ಹೇಳಬೇಡಿ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಪಕ್ಷದಲ್ಲಿರುವ ಅವಿವಾಹಿತ ನಾಯಕರ ಕುರಿತಂತೆ ಕಿಡಿಕಾರಿರುವ ಅವರು, ಬಿಜೆಪಿ ಮೊದಲು ಅವಿವಾಹಿತರಿಗೆ ಮದುವೆಯನ್ನು ಮಾಡಿಸಬೇಕು. ಬಿಜೆಪಿಯಲ್ಲಿರುವ ಎಲ್ಲಾ ಅವಿವಾಹಿತರು ವಿವಾಹಗಬೇಕೆಂದು  ನಾನು ಕೇಳಿಕೊಳ್ಳುತ್ತಿದ್ದೇನೆ ಎಂದು ಹೇಳಿದರು. ಅಲ್ಲದೆ, ಯಾರ ಹೆಸರನ್ನು ಹೇಳದೆ ಪರೋಕ್ಷವಾಗಿ ಮಾತನಾಡಿದ ಅವರು, ನಾಯಕರು ಅಸಂಬದ್ಧವಾಗಿ ಮಾತನಾಡುತ್ತಿದ್ದು, ಅವರ ಒತ್ತಡಗಳನ್ನು ಹೊರಹಾಕಲು ಮದುವೆಯಾಗಬೇಕಿದೆ ಎಂದು ಹೇಳಿದ್ದಾರೆ.

ಇದರಂತೆ ಅಜಂಖಾನ್ ಅವರ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರು, ಸಾಧ್ವಿ ಪ್ರಾಚಿಯನ್ನು ಪ್ರೀತಿ ಮಾಡುತ್ತಿದ್ದೇನೆಂದು ಹೇಳುತ್ತಿರುವ ಅಜಂಖಾನ್ ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅಜಂಖಾನ್ ಅವರು ಎಂತಹ ವ್ಯಕ್ತಿ. ಒಂದು ವೇಳೆ ಅವರ ತಾಯಿ ಹಾಗೂ ತಂಗಿಯರ ಬಗ್ಗೆಯೂ ಇದೇ ರೀತಿಯಾಗಿ ಆಲೋಚನೆ ಮಾಡಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT