ಸಾಂದರ್ಭಿಕ ಚಿತ್ರ 
ದೇಶ

ಸತ್ತವರಿಗೆ ನೋಟೀಸ್ ಜಾರಿ ಮಾಡಿದ ಬಂಗಾಳದ ಪೊಲೀಸರು

ಪಶ್ಚಿಮ ಬಂಗಾಳದ ಪೊಲೀಸರು ಸತ್ತ ವ್ಯಕ್ತಿಗಳಿಗೆ ನೋಟೀಸ್ ಜಾರಿ ಮಾಡಿರುವ ವಿಲಕ್ಷಣ ಘಟನೆ...

ಕೋಲ್ಕತಾ: ಪಶ್ಚಿಮ ಬಂಗಾಳದ ಪೊಲೀಸರು ಸತ್ತ ವ್ಯಕ್ತಿಗಳಿಗೆ ನೋಟೀಸ್ ಜಾರಿ ಮಾಡಿರುವ ವಿಲಕ್ಷಣ ಘಟನೆ ವರದಿಯಾಗಿದೆ.
ನಿಧನರಾಗಿರುವ ನಾಲ್ಕು ವ್ಯಕ್ತಿಗಳ ವಿರುದ್ದ ಪಶ್ಚಿಮ ಬಂಗಾಳದ ಪೊಲೀಸರು ಎಫ್ ಐಆರ್ ದಾಖಲಿಸಿ, ನೋಟೀಸ್ ಜಾರಿ ಮಾಡಿದ್ದಾರೆ.
ಕೆರೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದಾರೆಂಬ ಆರೋಪದ ಮೇಲೆ ನಿಧನರಾಗಿರುವ ನಾಲ್ಕು ಮಂದಿಗೆ ನೋಟೀಸ್ ಜಾರಿ ಮಾಡಿದ್ದು, ಸ್ಥಳೀಯ ಪೊಲೀಸ್ ಠಾಣೆಗೆ ಬಂದು ಶರಣಾಗುವಂತೆ ಸೂಚಿಸಿದ್ದಾರೆ. 
ಪೊಲೀಸರ ಈ ನೋಟೀಸ್ ನೋಡಿ ಹೂಗ್ಲಿ ಜಿಲ್ಲೆಯ ಚಂದರ್ ನಗೋರ್ ಮುನಿಸಿಪಲ್ ಕಾರ್ಪೋರೇಷನ್ ನ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಇದೇನಪ್ಪಾ ಈಗಾಗಲೇ ಸತ್ತು ಯಮಲೋಕದಲ್ಲಿರುವವರಿಗೆ ಪೊಲೀಸರು ನೋಟೀಸ್ ನೀಡಿದ್ದಾರೆಂದು ಗಾಬರಿಗೊಂಡಿದ್ದಾರೆ.
ನಿಧನರಾಗಿರುವ ಈ ನಾಲ್ಕು ಮಂದಿ ಕೆರೆ ಒತ್ತುವರಿ ಮಾಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ಆರೋಪಿಸಿ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿದ್ದಾರೆ.
ಈ ಮಧ್ಯೆ ಪೊಲೀಸರ ಈ ಆರೋಪವನ್ನು ತಳ್ಳಿ ಹಾಕಿರುವ ನಿಧನರಾಗಿರುವ ನಾಲ್ವರು ಕುಟುಂಬ ಸದಸ್ಯರು, ಕೆರೆಯನ್ನು ಒತ್ತುವರಿ ಮಾಡಿರುವುದು ಬಿಲ್ಡರ್ ಗಳು, ಅವರನ್ನು ರಕ್ಷಿಸಲು ಪೊಲೀಸರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಸ್ಥಳೀಯ ದೇವಸ್ಥಾನಕ್ಕೆ ಸೇರಿದ ಜಾಗವಾಗಿದ್ದು, ಇದನ್ನು ಬಿಲ್ಡರ್ ಗಳು ತಮ್ಮ ಅಕ್ರಮಗಳ ಕೆಲಸಗಳಿಗೆ ಬಳಿಸಿಕೊಳ್ಳುತ್ತಿದ್ದಾರೆ. ಅವರ ಬೆಂಬಲಕ್ಕೆ ಪೊಲೀಸರು ನಿಂತಿದ್ದು, ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಪ್ರಕರಣವನ್ನು ಬೇರೆ ಕಡೆಗೆ ತಿರುಚಿ ಬಿಲ್ಡಿರ್ ಗೆ ಸಹಾಯ ಮಾಡುವ ಹುನ್ನಾರ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ನಿಧನರಾಗಿರುವ ನಾಲ್ವರು ಆರೋಪಿಗಳೆಂದರೆ, 
ಕಲಿಚಂದ್ರ ಬೊಡಕ್ - 1970ರಲ್ಲಿ ನಿಧನ, 
ಬಿಪಿನ್ ಬಿಹಾರಿ - 1973ರಲ್ಲಿ ನಿಧನ, 
ದುರ್ಗಾ ಚರಣ್ ಬೊಡಕ್ - 1981 ನಿಧನ
ರಂಗಲಾಲ್ ಬೊಡಕ್- 4 ವರ್ಷಗಳ ಹಿಂದೆ ನಿಧನರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT