ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ 
ದೇಶ

ಮೇಲ್ಜಾತಿಯ ಹುಡುಗಿಯನ್ನು ವಿವಾಹವಾದುದಕ್ಕೆ ದಲಿತ ವಿದ್ಯಾರ್ಥಿ ಹತ್ಯೆ

ಮೇಲ್ಜಾತಿಯ ಹುಡುಗಿಯನ್ನು ವಿವಾಹವಾದುದಕ್ಕೆ 23ರ ಹರೆಯದ ದಲಿತ ವಿದ್ಯಾರ್ಥಿಯೊಬ್ಬನನ್ನು ಹತ್ಯೆಗೈದ ಘಟನೆ ವರದಿಯಾಗಿದೆ...

ನವದೆಹಲಿ: ಮೇಲ್ಜಾತಿಯ ಹುಡುಗಿಯನ್ನು ವಿವಾಹವಾದುದಕ್ಕೆ 23ರ ಹರೆಯದ ದಲಿತ ವಿದ್ಯಾರ್ಥಿಯೊಬ್ಬನನ್ನು ಹತ್ಯೆಗೈದ ಘಟನೆ ವರದಿಯಾಗಿದೆ.
ತಮಿಳ್ನಾಡಿನ ತಿರುಪುರ್‌ನಲ್ಲಿ ಭಾನುವಾರ ಮಧ್ಯಾಹ್ನ ವೇಳೆ ಮೂವರು ಆಗಂತುಕರು ವಿ. ಶಂಕರ್ ಎಂಬಾತನನ್ನು ಜನನಿಬಿಡ ಮಾರುಕಟ್ಟೆಯಲ್ಲಿ ಹತ್ಯೆ ಮಾಡಿದ್ದಾರೆ.
ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಶಂಕರ್ 8 ತಿಂಗಳ ಹಿಂದೆ ಕೌಸಲ್ಯ (19) ಯುವತಿಯನ್ನು ಮದುವೆಯಾಗಿದ್ದು ಈ ಬಗ್ಗೆ ಯುವತಿಯ ಹೆತ್ತವರು ವಿರೋಧ ವ್ಯಕ್ತ ಪಡಿಸಿದ್ದರು. 
ಬೈಕ್‌ನಲ್ಲಿ ಬಂದ ಆಗಂತುಕರು ಜನರ ಎದುರಲ್ಲೇ ಶಂಕರ್ ಅವರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಶಂಕರ್ ಜತೆಗಿದ್ದ ಕೌಸಲ್ಯ ಮೇಲೆಯೂ ಅವರು ಹಲ್ಲೆಗೈದಿದ್ದು, ಈಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.  
ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT