ಎಐಎಂಐಎಂ ನಾಯಕ ಅಸಾಸುದ್ದೀನ್ ಓವೈಸಿ 
ದೇಶ

'ಭಾರತ್ ಮಾತಾ ಕಿ ಜೈ' ಹೇಳಲಿಲ್ಲ ಎಂದರೆ ಪಾಕಿಸ್ತಾನಕ್ಕೆ ಹೋಗಿ: ಓವೈಸಿಗೆ ಶಿವಸೇನೆ

ಎಐಎಂಐಎಂ ನಾಯಕ ಅಸಾಸುದ್ದೀನ್ ಓವೈಸಿಯವರಿಗೆ ಭಾರತ್ ಮಾತಾ ಕಿ ಜೈ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳುವುದಾದರೆ, ಅವರು ಪಾಕಿಸ್ತಾನಕ್ಕೆ ಹೋಗಲಿ...

ನವದೆಹಲಿ: ಎಐಎಂಐಎಂ ನಾಯಕ ಅಸಾಸುದ್ದೀನ್ ಓವೈಸಿಯವರಿಗೆ ಭಾರತ್ ಮಾತಾ ಕಿ ಜೈ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳುವುದಾದರೆ, ಅವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಶಿವಸೇನೆ ಮಂಗಳವಾರ ಹೇಳಿಕೊಂಡಿದೆ.

ಓವೈಸಿಯವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ ರಾಮ್ ದಾಸ್ ಕದಮ್ ಅವರು, ಓವೈಸಿಯವರಿಗೆ ಭಾರತ್ ಮಾತಾಕಿ ಜೈ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳುವುದಾದರೆ, ಅವರು ಪಾಕಿಸ್ತಾನಕ್ಕೆ ಹೋಗಲಿ. ಓವೈಸಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರವನ್ನು ಕೇಳಲಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ.

ನಾನು ಈ ದೇಶದ ಸಂವಿಧಾನವನ್ನು ಪಾಲಿಸುತ್ತೇನೆ. ಆದರೆ, ಘೋಷಣೆ ಕೂಗುವಂತೆ ಯಾರಿಗೂ ಒತ್ತಾಯ ಮಾಡುವುದಿಲ್ಲ. ಆರ್ ಎಸಎಸ್ ತಮ್ಮ ಸಿದ್ಧಾಂತವನ್ನು ಜನರ ಮೇಲೆ ಹೇರಲು ಯತ್ನಿಸುತ್ತಿದೆ. ಈ ವಿಚಾರವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ನಾನಂತೂ ಘೋಷಣೆ ಕೂಗುವುದಿಲ್ಲ ಈಗ ಏನು ಮಾಡುತ್ತೀರಿ ಭಾಗವತ್ ಸಾಬ್ ಎಂದು ಓವೈಸಿ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT