ಛಗನ್‌ ಭುಜಬಲ್‌ 
ದೇಶ

ಮಹಾರಾಷ್ಟ್ರ ಸದನ ಹಗರಣ: ಛಗನ್‌ ಭುಜಬಲ್‌ 2 ದಿನ ಇಡಿ ವಶಕ್ಕೆ

ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ...

ಮುಂಬೈ: ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ ಛಗನ್‌ ಭುಜಬಲ್‌ ಅವರನ್ನು ಎರಡು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ಒಪ್ಪಿಸಲಾಗಿದೆ. 
ಹಣ ದುರ್ಬಳಕೆ ಆರೋಪದ ಮೇಲೆ ಭುಜಬಲ್‌ ಅವರನ್ನು ನಿನ್ನೆ ರಾತ್ರಿ ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಬಂಧಿಸಿದ್ದರು. ಸುಮಾರು 10 ಗಂಟೆಗಳ ವಿಚಾರಣೆ ಬಳಿಕ ಇಂದು ಅವರನ್ನು ಮುಂಬಯಿ ಸೆಶನ್ಸ್‌ ಕೋರ್ಟಿನ ವಿಶೇಷ ಪಿಎಂಎಲ್‌ಎ ಕೋರ್ಟ್ ಗೆ ಹಾಜರುಪಡಿಸಿದ್ದರು. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮೂರು ದಿನಗಳ ಕಾಲ ತಮ್ಮ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಿದ್ದಾರೆ.
ವಿಚಾರಣೆ ನಡೆಸಿದ ಕೋರ್ಟ್, ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿಯನ್ನು ಎರಡು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದೆ.
ಜಾರಿ ನಿರ್ದೇಶನಲಾಯವು ಭುಜಬಲ್‌, ಅವರ ಪುತ್ರ ಹಾಗೂ ಸೋದರ ಸಂಬಂಧಿ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಮಹಾರಾಷ್ಟ್ರ ಸದನ ಹಗರಣ ಮತ್ತು ಕಲೀನಾ ಭೂಕಬಳಿಕೆ ಹಗರಣಕ್ಕೆ ಸಂಬಂಧಿಸಿ ಇವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT