ಅರುಣ್ ಜೇಟ್ಲಿ 
ದೇಶ

ಪ್ರಮುಖ ವ್ಯಕ್ತಿಗಳಿಂದ ಕೃಷಿ ಆದಾಯದ ಹೆಸರಿನಲ್ಲಿ ತೆರಿಗೆ ವಂಚನೆ: ಅರುಣ್ ಜೇಟ್ಲಿ

ಕೃಷಿ ಗಳಿಕೆಯ ಹೆಸರಿನಲ್ಲಿ ಆದಾಯ ತೆರಿಗೆ ವಂಚನೆ ಮಾಡುತ್ತಿರುವ ಕೆಲವು ಪ್ರಮುಖ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸಂಸತ್ ಗೆ ತಿಳಿಸಿದ್ದಾರೆ.

ನವದೆಹಲಿ: ಕೃಷಿ ಗಳಿಕೆಯ ಹೆಸರಿನಲ್ಲಿ  ಆದಾಯ ತೆರಿಗೆ ವಂಚನೆ ಮಾಡುತ್ತಿರುವ ಕೆಲವು ಪ್ರಮುಖ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸಂಸತ್ ಗೆ ತಿಳಿಸಿದ್ದಾರೆ.

ತೆರಿಗೆ ವ್ಯಾಪ್ತಿಗೆ ಬರುವ ಆದಾಯವನ್ನು ಕೃಷಿ ಆದಾಯ ಎನ್ನುತ್ತಿರುವ ಪ್ರಮುಖ ವ್ಯಕ್ತಿಗಳ ಹೆಸರು ಬಹಿರಂಗವಾದರೆ ಅದನ್ನು ರಾಜಕೀಯ ದ್ವೇಷ ಎಂದು ವಿಪಕ್ಷಗಳು ಆರೋಪ ಮಾಡುವಂತಿಲ್ಲ ಎಂದು ಜೇಟ್ಲಿ ವಿಪಕ್ಷಗಳಿಗೆ ಹೇಳಿದ್ದಾರೆ. ದೇಶದಲ್ಲಿರುವ ಕಪ್ಪು ಹಣ ಕೃಷಿ ಆದಾಯದ ರೂಪದಲ್ಲಿ ಹರಿದಾಡುತ್ತಿದ್ದು ತೆರಿಗೆ ವಂಚನೆ ಮಾಡುವುದಕ್ಕೂ ಸಹ ಸಹಕಾರಿಯಾಗಿರುವುದರ ಬಗ್ಗೆ ಜೆಡಿ-ಯು, ಎಸ್ ಪಿ, ಬಿಎಸ್ ಪಿ ನಾಯಕರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅರುಣ್ ಜೇಟ್ಲಿ, ಆದಾಯ ತೆರಿಗೆ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಆದಾಯ ತೆರಿಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ತನಿಖೆ ಮುಕ್ತಾಯಗೊಂಡ ಬಳಿಕ, ವಿಪಕ್ಷಗಳು ಅಪರಾಧಿಗಳನ್ನು ರಾಜಕೀಯ ಬಲಿಪಶುಗಳನ್ನಾಗಿ ಮಾಡಲಾಗಿದೆ ಎಂದು ಆರೋಪಿಸುವಂತಿಲ್ಲ ಎಂದಿದ್ದಾರೆ ಜೇಟ್ಲಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT