ಅರವಿಂದ್ ಕೇಜ್ರಿವಾಲ್ 
ದೇಶ

ಎಲ್ಲಕ್ಕಿಂತ ಬಿಜೆಪಿಯೇ ಅತ್ಯಂತ ರಾಷ್ಟ್ರ ವಿರೋಧಿ: ಕೇಜ್ರಿವಾಲ್ ಟ್ವೀಟ್

ಎಲ್ಲಕ್ಕಿಂತ ಭಾರತೀಯ ಜನತಾ ಪಕ್ಷ(ಬಿಜೆಪಿ)ವೇ ಅತ್ಯಂತ ರಾಷ್ಟ್ರ ವಿರೋಧಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್...

ನವದೆಹಲಿ: ಎಲ್ಲಕ್ಕಿಂತ ಭಾರತೀಯ ಜನತಾ ಪಕ್ಷ(ಬಿಜೆಪಿ)ವೇ ಅತ್ಯಂತ ರಾಷ್ಟ್ರ ವಿರೋಧಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಬುಧವಾರ ಬೆಳಿಗ್ಗೆ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದ ಕೇಜ್ರಿವಾಲ್, ಎಲ್ಲಕ್ಕಿಂತ ಬಿಜೆಪಿ ಅತ್ಯಂತ ರಾಷ್ಟ್ರವಿರೋಧಿ. ಅಷ್ಟೇ ಅಲ್ಲದೇ, ಜೆಎನ್ ಯು ಕ್ಯಾಂಪಸ್ ನಲ್ಲಿ ರಾಷ್ಟವಿರೋಧಿ ಘೋಷಣೆ ಕೂಗಿದವರನ್ನು ರಕ್ಷಿಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ದೇಶ ವಿರೋಧಿ ಘೋಷಣೆ ಕೂಗಿದವರು ಕಾಶ್ಮೀರದವರು. ಆದರೆ, ಅವರನ್ನು ಬಿಜೆಪಿ ರಕ್ಷಿಸುತ್ತಿದೆ. ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರನ್ನು ಬೇಸರ ಪಡಿಸಲು ಬಿಜೆಪಿಗೆ ಇಷ್ಟವಿಲ್ಲ. ಹಾಗಾಗಿ, ನಿಜವಾದ ಆರೋಪಿಗಳ ರಕ್ಷಣೆ ಮಾಡುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ. 
ಈ ಹಿಂದೆ ಕೇಜ್ರಿವಾಲ್ ಅವರು ''ನಾನು ಮೋದಿಯವರಿಗಿಂತ ದೊಡ್ಡ ದೇಶಭಕ್ತ. ದೇಶವನ್ನು ಒಡೆಯುತ್ತೇವೆ ಎಂದು ಘೋಷಣೆ ಕೂಗಿದವರನ್ನು ಯಾಕೆ ಇಲ್ಲಿಯವರೆಗೆ ಬಂಧಿಸಿಲ್ಲ ಎಂದು ನಾನು ಕೇಳುತ್ತೇನೆ. ಯಾಕೆಂದರೆ ಅವರು ಕಾಶ್ಮೀರದವರು. ಅವರನ್ನು ಬಂಧಿಸಿದರೆ ಮೆಹಬೂಬ ಮುಫ್ತಿ ಮುನಿಸಿಕೊಳ್ಳುತ್ತಾರೆ'' ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT