ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನ ಕೊಲೆ 
ದೇಶ

ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನ ಕೊಲೆ

ಹರಿಯಾಣದಲ್ಲಿ ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನನ್ನು ಹತ್ಯೆ ಮಾಡುವ ಮೂಲಕ ದುಷ್ಕರ್ಮಿಗಳು ತಮ್ಮ ಅಟ್ಟಹಾಸವನ್ನು ಮರೆದಿದ್ದಾರೆ...

ರೊಹ್ಟಕ್: ಹರಿಯಾಣದಲ್ಲಿ ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನನ್ನು ಹತ್ಯೆ ಮಾಡುವ ಮೂಲಕ ದುಷ್ಕರ್ಮಿಗಳು ತಮ್ಮ ಅಟ್ಟಹಾಸವನ್ನು ಮರೆದಿದ್ದಾರೆ.

ಸುಖ್ವಿಂದರ್ ನರ್ವಾಲ್ ಹತ್ಯೆಯಾದ ಆಟಗಾರನಾಗಿದ್ದು, ಇಂದು ಬೆಳಗ್ಗೆ ಸುಖ್ವಿಂದರ್ ಕಬಡ್ಡಿ ಅಭ್ಯಾಸ ಮುಗಿಸಿ ಮನೆಗೆ ಬರುತ್ತಿದ್ದ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಏಕಾಏಕಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಸುಖ್ವಿಂದರ್ ನೆಲಕ್ಕೆ ಬೀಳುತ್ತಿದ್ದಂತೆ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾರೆ.

ಈ ಹತ್ಯೆಯ ದೃಶ್ಯವೀಗ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಆದರೆ, ಇಲ್ಲಿಯವರಗೆ ದುಷ್ಕರ್ಮಿಗಳ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.

ಖಾಸಗಿ ಮಾಧ್ಯಮವೊಂದು ವರದಿ ಮಾಡಿರುವ ಪ್ರಕಾರ ಕೆಲವು ದಿನಗಳ ಹಿಂದಷ್ಟೇ ಇಂತಹುದ್ದೇ ಮತ್ತೊಬ್ಬ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಕಬಡ್ಡಿ ಆಟಗಾರನಾಗಿದ್ದ ದೀಪಕ್ ಕುಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಅಂತಹುದೇ ಘಟನೆ ಮರುಕಳಿಸಿದೆ ಎಂದು ಹೇಳಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!