ದೇಶ

ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನ ಕೊಲೆ

Manjula VN

ರೊಹ್ಟಕ್: ಹರಿಯಾಣದಲ್ಲಿ ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನನ್ನು ಹತ್ಯೆ ಮಾಡುವ ಮೂಲಕ ದುಷ್ಕರ್ಮಿಗಳು ತಮ್ಮ ಅಟ್ಟಹಾಸವನ್ನು ಮರೆದಿದ್ದಾರೆ.

ಸುಖ್ವಿಂದರ್ ನರ್ವಾಲ್ ಹತ್ಯೆಯಾದ ಆಟಗಾರನಾಗಿದ್ದು, ಇಂದು ಬೆಳಗ್ಗೆ ಸುಖ್ವಿಂದರ್ ಕಬಡ್ಡಿ ಅಭ್ಯಾಸ ಮುಗಿಸಿ ಮನೆಗೆ ಬರುತ್ತಿದ್ದ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಏಕಾಏಕಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಸುಖ್ವಿಂದರ್ ನೆಲಕ್ಕೆ ಬೀಳುತ್ತಿದ್ದಂತೆ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾರೆ.

ಈ ಹತ್ಯೆಯ ದೃಶ್ಯವೀಗ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಆದರೆ, ಇಲ್ಲಿಯವರಗೆ ದುಷ್ಕರ್ಮಿಗಳ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.

ಖಾಸಗಿ ಮಾಧ್ಯಮವೊಂದು ವರದಿ ಮಾಡಿರುವ ಪ್ರಕಾರ ಕೆಲವು ದಿನಗಳ ಹಿಂದಷ್ಟೇ ಇಂತಹುದ್ದೇ ಮತ್ತೊಬ್ಬ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಕಬಡ್ಡಿ ಆಟಗಾರನಾಗಿದ್ದ ದೀಪಕ್ ಕುಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಅಂತಹುದೇ ಘಟನೆ ಮರುಕಳಿಸಿದೆ ಎಂದು ಹೇಳಿಕೊಂಡಿದೆ.

SCROLL FOR NEXT