ಜಾವೇದ್ ಅಖ್ತರ್- ರಂಗಕರ್ಮಿ ಜಯಶ್ರೀ 
ದೇಶ

ರಂಗಕರ್ಮಿ ಜಯಶ್ರೀ ಸೇರಿ 17 ರಾಜ್ಯಸಭೆ ಸದಸ್ಯರಿಗೆ ಬೀಳ್ಕೊಡುಗೆ

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಂಗಕರ್ಮಿ ಬಿ.ಜಯಶ್ರೀ, ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್...

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಂಗಕರ್ಮಿ ಬಿ.ಜಯಶ್ರೀ, ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್ ಸೇರಿದಂತೆ 17 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ರಾಜ್ಯಸಭೆಯಲ್ಲಿ ಮಂಗಳವಾರ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. 
ಈ ವೇಳೆ ಹಾಜರಿದ್ದ ರಾಜ್ಯಸಭೆ ಸಭಾಪತಿ ಹಮೀದ್ ಅನ್ಸಾರಿ, ಉಪಸಭಾಪತಿ, ಪಿಜೆ ಕುರಿಯನ್, ಸಭಾನಾಯಕ ಅರುಣ್ ಜೇಟ್ಲಿ ಹಾಗೂ ಪ್ರತಿಪಕ್ಷ ನಾಯಕ ಗುಲಾಮ್ ನಬಿ ಅಜಾದ್ ಶುಭ ಕೋರಿದ್ದಾರೆ. 
ನಂತರ ಮಾತನಾಡಿದ ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್, ದೇಶದ ಭವಿಷ್ಯದ ದಷ್ಟಿಯಿಂದ ಆಡಳಿತ ಹಾಗೂ ವಿರೋಧ ಪಕ್ಷಗಳು ಒಗ್ಗೂಡಿ ಕೆಲಸ ಮಾಡಬೇಕಿದೆ. ಸಂಸತ್ ಕಲಾಪಗಳಿಗೆ ಅಡ್ಡಿಮಾಡುವುದರಿಂದ ದೇಶದ ಪ್ರಗತಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಾಲಚಂದ್ರ ಮುಂಗೇಕರ್ (ಸಂಕೇತ), ಅಶ್ವನಿ ಕುಮಾರ್ (ಕಾಂಗ್ರೆಸ್), ಎಂ ಎಸ್ ಗಿಲ್ (ಕಾಂಗ್ರೆಸ್), ಮಣಿ ಶಂಕರ್ ಅಯ್ಯರ್ (ಕಾಂಗ್ರೆಸ್), ಅವಿನಾಶ್ ರಾಯ್ ಖನ್ನಾ (ಬಿಜೆಪಿ), ಜಾವೇದ್ ಅಖ್ತರ್, ಜಯಶ್ರೀ, ಕೆ ಬಾಲಗೋಪಾಲನ್ (ಸಿಪಿಎಂ) ಮತ್ತು ಟಿ ಎನ್ ಸೀಮಾ (ಸಿಪಿಎಂ) ನಿವೃತ್ತಿ ಹೊಂದುತ್ತಿರುವ ಸದಸ್ಯರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT