ಜಾವೇದ್ ಅಖ್ತರ್- ರಂಗಕರ್ಮಿ ಜಯಶ್ರೀ 
ದೇಶ

ರಂಗಕರ್ಮಿ ಜಯಶ್ರೀ ಸೇರಿ 17 ರಾಜ್ಯಸಭೆ ಸದಸ್ಯರಿಗೆ ಬೀಳ್ಕೊಡುಗೆ

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಂಗಕರ್ಮಿ ಬಿ.ಜಯಶ್ರೀ, ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್...

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಂಗಕರ್ಮಿ ಬಿ.ಜಯಶ್ರೀ, ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್ ಸೇರಿದಂತೆ 17 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ರಾಜ್ಯಸಭೆಯಲ್ಲಿ ಮಂಗಳವಾರ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. 
ಈ ವೇಳೆ ಹಾಜರಿದ್ದ ರಾಜ್ಯಸಭೆ ಸಭಾಪತಿ ಹಮೀದ್ ಅನ್ಸಾರಿ, ಉಪಸಭಾಪತಿ, ಪಿಜೆ ಕುರಿಯನ್, ಸಭಾನಾಯಕ ಅರುಣ್ ಜೇಟ್ಲಿ ಹಾಗೂ ಪ್ರತಿಪಕ್ಷ ನಾಯಕ ಗುಲಾಮ್ ನಬಿ ಅಜಾದ್ ಶುಭ ಕೋರಿದ್ದಾರೆ. 
ನಂತರ ಮಾತನಾಡಿದ ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್, ದೇಶದ ಭವಿಷ್ಯದ ದಷ್ಟಿಯಿಂದ ಆಡಳಿತ ಹಾಗೂ ವಿರೋಧ ಪಕ್ಷಗಳು ಒಗ್ಗೂಡಿ ಕೆಲಸ ಮಾಡಬೇಕಿದೆ. ಸಂಸತ್ ಕಲಾಪಗಳಿಗೆ ಅಡ್ಡಿಮಾಡುವುದರಿಂದ ದೇಶದ ಪ್ರಗತಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಾಲಚಂದ್ರ ಮುಂಗೇಕರ್ (ಸಂಕೇತ), ಅಶ್ವನಿ ಕುಮಾರ್ (ಕಾಂಗ್ರೆಸ್), ಎಂ ಎಸ್ ಗಿಲ್ (ಕಾಂಗ್ರೆಸ್), ಮಣಿ ಶಂಕರ್ ಅಯ್ಯರ್ (ಕಾಂಗ್ರೆಸ್), ಅವಿನಾಶ್ ರಾಯ್ ಖನ್ನಾ (ಬಿಜೆಪಿ), ಜಾವೇದ್ ಅಖ್ತರ್, ಜಯಶ್ರೀ, ಕೆ ಬಾಲಗೋಪಾಲನ್ (ಸಿಪಿಎಂ) ಮತ್ತು ಟಿ ಎನ್ ಸೀಮಾ (ಸಿಪಿಎಂ) ನಿವೃತ್ತಿ ಹೊಂದುತ್ತಿರುವ ಸದಸ್ಯರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು- DKS; Video

SCROLL FOR NEXT