ಸುಮಿತ್ರಾ ಮಹಾಜನ್ 
ದೇಶ

ಟಿಎಂಸಿ ಸಂಸದರ ಭ್ರಷ್ಟಾಚಾರ ಪ್ರಕರಣ: ಲೋಕಸಭಾ ನೀತಿ ಸಮಿತಿಯಿಂದ ತನಿಖೆ

ತೃಣಮೂಲ ಕಾಂಗ್ರೆಸ್ ನ ಸಂಸದರ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ಲೋಕಸಭಾ ನೀತಿ ಸಮಿತಿ ತನಿಖೆ ನಡೆಸಲಿದೆ...

ನವದೆಹಲಿ: ತೃಣಮೂಲ ಕಾಂಗ್ರೆಸ್ ನ ಸಂಸದರ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ಲೋಕಸಭಾ ನೀತಿ ಸಮಿತಿ ತನಿಖೆ ನಡೆಸಲಿದೆ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಬುಧವಾರ ಘೋಷಿಸಿದ್ದಾರೆ. 
ಪ್ರಶ್ನೋತ್ತರ ಅವಧಿಯ ನಂತರ ಬಿಜೆಪಿ, ಕಾಂಗ್ರೆಸ್ ಹಾಗೂ ಸಿಪಿಐಎಂನ ಸದಸ್ಯರು ಒಟ್ಟಾಗಿ ಟಿಎಂಸಿ ಸಂಸದರ ಭ್ರಷ್ಟಾಚಾರ ಪ್ರಕರಣದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಾತನಾಡಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಟಿಎಂಸಿ ಸಂಸದರ ವಿರುದ್ಧ ಗಂಭೀರ ಆರೋಪ ಬಂದಿದ್ದು, ಇದು ಸಂಸತ್ತಿನ ವಿಶ್ವಾಸಾರ್ಹತೆಯ ಪ್ರಶ್ನೆ ಎಂದರು. ಅಲ್ಲದೆ ಈ ಕುರಿತು ಲೋಕಸಭಾ ನೀತಿ ಸಮಿತಿ ತನಿಖೆ ನಡೆಸಲಿದೆ ಎಂದು ಘೋಷಿಸಿದರು.
ಟಿಎಂಸಿಯ ಸಂಸದರು ಹಾಗೂ ಶಾಸಕರು ನಕಲಿ ಕಂಪನಿಯೊಂದರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವಿಡಿಯೋ ದೃಶ್ಯಾವಳಿ ಹಲವು ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದಂತೆ ನಿನ್ನೆ ಲೋಕಸಭೆ ಕಲಾಪದ ವೇಳೆ ತೀವ್ರ ಗದ್ದಲ, ಕೋಲಾಹಲ ನಡೆದಿತ್ತು. ಕಾಂಗ್ರೆಸ್, ಸಿಪಿಎಂ ಮತ್ತು ಬಿಜೆಪಿ ಸದಸ್ಯರು ಸಂಸದೀಯ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.
ಖಾಸಗಿ ಸುದ್ದಿ ಪೋರ್ಟಲ್ ವೊಂದು ಸೋಮವಾರ ಕುಟುಕು ಕಾರ್ಯಾಚರಣೆಯ ವಿಡಿಯೋ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಟಿಎಂಸಿಗೆ ಇದರಿಂದ ತೀವ್ರ ಮುಖಭಂಗವಾಗಿದೆ. ಅಲ್ಲಿನ ಪ್ರಮುಖ ವಿರೋಧ ಪಕ್ಷವಾದ ಸಿಪಿಎಂ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ಬಿಜೆಪಿಗೆ ಪ್ರಮುಖ ಅಸ್ತ್ರವಾಗಿದೆ ಎಂದು ಹೇಳಲಾಗುತ್ತಿದೆ.
ಸುದ್ದಿ ಜಾಲದ ಕುಟುಕು ಕಾರ್ಯಾಚರಣೆ ಸಿಪಿಎಂ, ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಲ್ಲಿ ಒಂದು ಮಾಡಿದ್ದು, ಟಿಎಂಸಿ ನಾಯಕರ ವಿರುದ್ಧ ಭಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಸು ದಾಖಲಿಸುವಂತೆ ಒತ್ತಾಯಿಸಿದರು. ಅಲ್ಲದೆ ಲಂಚ ಆರೋಪದ ವಿರುದ್ಧ ತನಿಖೆ ನಡೆಸಲು ವಿಶೇಷ ಸಂಸದೀಯ ತಂಡವನ್ನು ರಚಿಸುವಂತೆ ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT