ಛಗನ್‌ ಭುಜಬಲ್‌ 
ದೇಶ

ಮಹಾ ಸದನ ಹಗರಣ: ಭುಜಬಲ್ ಗೆ ಮಾರ್ಚ್ 31ರವರೆಗೆ ನ್ಯಾಯಾಂಗ ಬಂಧನ

ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ...

ಮುಂಬೈ: ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ ಛಗನ್‌ ಭುಜಬಲ್‌ ಅವರನ್ನು ಮಾರ್ಚ್ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
ಹಣ ದುರ್ಬಳಕೆ ಆರೋಪದ ಮೇಲೆ ಭುಜಬಲ್‌ ಅವರನ್ನು ಮಾರ್ಚ್ 14ರಂದು ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಮುಂಬಯಿ ಸೆಶನ್ಸ್‌ ಕೋರ್ಟಿನ ವಿಶೇಷ ಪಿಎಂಎಲ್‌ಎ ಕೋರ್ಟ್ ಗೆ ಹಾಜರುಪಡಿಸಿ, ಎರಡು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು. 
ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿಯನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಇಂದು ಮತ್ತೆ ಪಿಎಂಎಲ್ ಎ ಕೋರ್ಟ್ ಗೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಾರಿ ನಿರ್ದೇಶನಲಾಯವು ಭುಜಬಲ್‌, ಅವರ ಪುತ್ರ ಹಾಗೂ ಸೋದರ ಸಂಬಂಧಿ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಮಹಾರಾಷ್ಟ್ರ ಸದನ ಹಗರಣ ಮತ್ತು ಕಲೀನಾ ಭೂಕಬಳಿಕೆ ಹಗರಣಕ್ಕೆ ಸಂಬಂಧಿಸಿ ಇವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

CM ಪಟ್ಟ ಜಟಾಪಟಿ: ಮತ್ತಷ್ಟು ಹರಿತವಾಯ್ತು ದಲಿತ ಸಿಎಂ ಅಸ್ತ್ರ, DKS ವಿರುದ್ಧ ಸಿದ್ದು ಬಣ ಪ್ರತಿತಂತ್ರ..!

ರಂಜಾನ್, ಹೋಳಿ ಹಬ್ಬ: ಶಾಂತಿ ಕದಡಿದರೆ ಕಠಿಣ ಕ್ರಮ, ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಖಡಕ್ ಸೂಚನೆ

ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!

ರನ್ ರೇಟ್ ಹೆಚ್ಚಿಸಿಕೊಳ್ಳಲು ಜಿಂಬಾಬ್ವೆ ವಿರುದ್ಧ ದಾಖಲೆಯ 254 ರನ್ ಸಿಡಿಸಿದ ವೆಸ್ಟ್ ಇಂಡೀಸ್, ಭಾರತಕ್ಕೆ ಕಂಟಕ!

SCROLL FOR NEXT