ಕುದುರೆ ಮೇಲೆ ಹಲ್ಲೆ ನಡೆಸುತ್ತಿರುವ ಶಾಸಕ (ಕೃಪೆ: ಎಎನ್ಐ) 
ದೇಶ

'ಶಕ್ತಿಮಾನ್' ಕುದುರೆಯ ಕಾಲು ಮುರಿದ ಬಿಜೆಪಿ ಶಾಸಕ ಬಂಧನ

ಪೊಲೀಸ್ ಕುದುರೆ ಶಕ್ತಿಮಾನ್‌ಗೆ ಹೊಡೆದು ಅದರ ಕಾಲು ಮುರಿದ ಬಿಜೆಪಿ ಶಾಸಕ ಗಣೇಶ್ ಜೋಷಿಯವರನ್ನು ಶುಕ್ರವಾರ ಬಂಧಿಸಲಾಗಿದೆ. ಮುಸ್ಸೂರಿ ಶಾಸಕರಾಗಿರುವ ಗಣೇಶ್ ಜೋಷಿ...

ಡೆಹ್ರಾಡೂನ್: ಪೊಲೀಸ್ ಕುದುರೆ ಶಕ್ತಿಮಾನ್‌ಗೆ ಹೊಡೆದು ಅದರ ಕಾಲು ಮುರಿದ ಬಿಜೆಪಿ ಶಾಸಕ ಗಣೇಶ್ ಜೋಷಿಯವರನ್ನು ಶುಕ್ರವಾರ ಬಂಧಿಸಲಾಗಿದೆ. ಮುಸ್ಸೂರಿ ಶಾಸಕರಾಗಿರುವ ಗಣೇಶ್ ಜೋಷಿ ಮತ್ತು ಅವರ ಸಹ ಕಾರ್ಯಕರ್ತರು ಮಾರ್ಚ್ 14 ರಂದು ಮುಖ್ಯಮಂತ್ರಿ ವಿರುದ್ಧ ನಡೆಸಿದ ಪ್ರತಿಭಟನೆ ವೇಳೆ ಪೊಲೀಸ್ ಪಡೆಯ ಕುದುರೆ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದರು.
ಜೋಷಿಯವರ ಹೊಡೆತಕ್ಕೆ ಕುದುರೆಯ ಕಾಲು ಮುರಿದಿದ್ದು, ಈಗ ಕೃತಕ ಕಾಲನ್ನು ಜೋಡಿಸಲಾಗಿದೆ. ಈ ಕೃತ್ಯವನ್ನು ಕಾಂಗ್ರೆಸ್ ಖಂಡಿಸಿದ್ದು, ಮೂಕ ಪ್ರಾಣಿಗೆ ಹೊಡೆದ ಶಾಸಕನನ್ನು ತರಾಟೆಗೆ ತೆಗೆದುಕೊಂಡಿತ್ತು.
ಉತ್ತರಾಖಂಡ್ ಪೊಲೀಸ್ ಪಡೆಯಲ್ಲಿರುವ ಶಕ್ತಿಮಾನ್‌ನ ಕಾಲಿನಲ್ಲಿ ರಕ್ತ ಸಂಚಾರ ಸ್ಥಗಿತಗೊಂಡ ಕಾರಣ ಗುರುವಾರ ರಾತ್ರಿ ಕಾಲನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲಾಗಿತ್ತು. ಕಾಲಿನಲ್ಲಿ ಗಾಯ ದೊಡ್ಡದಾಗಿದ್ದು, ಶುಕ್ರವಾರಕ್ಕೆ ಮುನ್ನ ಕಾಲು ತುಂಡರಿಸಿ ತೆಗೆಯದೇ ಇರುತ್ತಿದ್ದರೆ ಕುದುರೆ ಸಾವನ್ನಪ್ಪುತ್ತಿತ್ತು. ಕುದುರೆಯ ಪ್ರಾಣವನ್ನು ರಕ್ಷಿಸುವ ಸಲುವಾಗಿ ಅದರ ಕಾಲು ತುಂಡರಿಸಿ ಕೃತಕ ಕಾಲಿನ ಜೋಡಣೆ ಮಾಡಲಾಗಿದೆ. ಇದೀಗ ಕುದುರೆ ಆಹಾರ ಸೇವಿಸುವಷ್ಟು ಶಕ್ತವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಅದೇ ವೇಳೆ  ಗಣೇಶ್ ಜೋಷಿಯವರು ನಿನ್ನೆ ಕುದುರೆಯನ್ನು ನೋಡಲು ಹೋಗಿದ್ದರು. ಮಾನವೀಯತೆಯ ನೆಲೆಯಲ್ಲಿ ನಾನು ಕುದುರೆಯನ್ನು ನೋಡಲು ಹೋಗಿದ್ದೆ. ನಾನು ಕುದುರೆಯ ಮೇಲೆ ಹಲ್ಲೆ ನಡೆಸಿಲ್ಲ, ಆದರೆ ಸಾಧುವಾದ ಒಂದು ಪ್ರಾಣಿ ಅಲ್ಲಿ ಒದ್ದಾಡುತ್ತಿರುವುದನ್ನು ನೋಡಲು ಸಾಧ್ಯವಾಗುತ್ತಿಲ್ಲ ಎಂದು ಜೋಷಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT