ಸಾಂದರ್ಭಿಕ ಚಿತ್ರ 
ದೇಶ

ಬಿಜೆಪಿ ಸೇರಿದ ಕಾರ್ಗಿಲ್ ಹೀರೋ ಪ.ಬಂಗಾಳ ವಿಧಾನಸಭೆ ಚುನಾವಣೆಗೆ ಸ್ಪರ್ಧೆ

ಕಾರ್ಗಿಲ್ ಯುದ್ಧದ ಹೀರೋ ಕರ್ನಲ್ ದಿಪ್ತಾಂಶು ಚೌಧರಿ ಅವರು ಶುಕ್ರವಾರ ಭಾರತೀಯ ಜನತಾ ಪಕ್ಷ ಸೇರಿದ್ದು,...

ನವದೆಹಲಿ: ಕಾರ್ಗಿಲ್ ಯುದ್ಧದ ಹೀರೋ ಕರ್ನಲ್ ದಿಪ್ತಾಂಶು ಚೌಧರಿ ಅವರು ಶುಕ್ರವಾರ ಭಾರತೀಯ ಜನತಾ ಪಕ್ಷ ಸೇರಿದ್ದು, ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಸನ್ಸೊಲ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಚೌಧರಿ ಅವರು ಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ಹಾಗೂ ರಾಜ್ಯವರ್ಧನ್ ಸಿಂಗ್ ರಾಥೋರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಈ ವೇಳೆ ಪಕ್ಷದ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳ ಸಹ ಉಸ್ತುವಾರಿ ಸಿದ್ಧಾರ್ಥ್ ನಾಥ್ ಸಿಂಗ್ ಅವರು ಸಹ ಉಪಸ್ಥಿತರಿದ್ದರು.

ಚೌಧರಿ ಅವರು ಸೇನೆಯಲ್ಲಿ ದೇಶಕ್ಕಾಗಿ ಕೆಲಸ ಮಾಡಿದ ರೀತಿಯಲ್ಲೇ ಈಗ ಪಕ್ಷಕ್ಕಾಗಿ ಮತ್ತು ಪಶ್ಚಿಮ ಬಂಗಾಳ ಜನತೆಗಾಗಿ ಕೆಲಸ ಮಾಡಲಿದ್ದಾರೆ ಎಂದು ರಾಥೋರ್ ತಿಳಿಸಿದರು. ಅಲ್ಲದೆ ದಿಪ್ತಾಂಶು ಚೌಧರಿ ಅವರು ಕಾರ್ಗಿಲ್ ಯುದ್ಧದಲ್ಲಿ ಆರಂಭದಿಂದ ಅಂತ್ಯದವರೆಗೂ ಭಾಗವಹಿಸಿದ್ದರು ಎಂದು ಹೇಳಿದರು.

ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್ - ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

ಹುಣಸೆ, ಹಲಸು, ನೇರಳೆ ಹಣ್ಣುಗಳಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಿ: ಕೇಂದ್ರಕ್ಕೆ ಎಚ್‌ಡಿ ದೇವೇಗೌಡ ಒತ್ತಾಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರಗೆ ಸೇರಿದ ₹8.07 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು!

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್: ಎಲ್ಲರೂ ಸೇರಿರೋದ್ರಲ್ಲಿ ತಪ್ಪೇನಿದೆ; ಡಿ.ಕೆ. ಶಿವಕುಮಾರ್

SCROLL FOR NEXT